ರಾಜ್ಯದಲ್ಲಿ ಲೈಲಾ ತಂದ ಭರ್ಜರಿ ಮಳೆ

ರಾಜಧಾನಿಯಲ್ಲಿ ಕಳೆದ ವಾರ 35 ಡಿಗ್ರಿ ಸೆಲ್ಶಿಯಸ್ ತಲುಪಿದ್ದ ತಾಪಮಾನ ಇಂದು 26 ಡಿಗ್ರಿಗಿಳಿದಿದೆ. ಕಳೆದ ಮೂರು ದಿನಗಳಿಂದ ಹಗಲು ಮರೆಯಾಗಿ ಸಂಜೆ ಮಾತ್ರ ಮಳೆ ಸುರಿಸುತ್ತಿದ್ದ ಮೋಡಗಳು ಇಂದು ಬೆಳಗಿನ ಜಾವದಿಂದಲೇ ಮೋಡಗಳ ಚಪ್ಪರವನ್ನು ಹಾಕಿವೆ. ಸೂರ್ಯನಿಗೆ ಅಪ್ಪಿತಪ್ಪಿ ಕೂಡ ಇಣುಕಲು ಅವಕಾಶ ನೀಡಿಲ್ಲ.
ಹವಾಮಾನ ಇಲಾಖೆಯ ಪ್ರಕಾರ, ಇದೇ ಸ್ಥಿತಿ ರಾಜ್ಯದಾದ್ಯಂತ ಮುಂದುವರಿಯಲಿದೆ. ಕರಾವಳಿ, ಮಲೆನಾಡು ಪ್ರದೇಶ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಿದೆ. ಕರಾವಳಿ ಪ್ರದೇಶದಲ್ಲಿ ಮೀನುಗಾರರು ಸಮುದ್ರದಲ್ಲಿ ಮೀನು ಹಿಡಿಯುವ ಸಾಹಸಕ್ಕೆ ಕೈಹಾಕಬಾರದೆಂದು ಎಚ್ಚರಿಕೆಯನ್ನೂ ನೀಡಿದೆ.
ಕರಾವಳಿಯಲ್ಲಿ ಭಾರೀ ಮಳೆ : ಹವಾಮಾನದಲ್ಲುಂಟಾದ ಬದಲಾವಣೆಯಿಂದಾಗಿ ಕರ್ನಾಟಕದ ಕರಾವಳಿಯುದ್ದಕ್ಕೂ ಭರ್ಜರಿಯಾಗಿ ಮಳೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 11 ಸೆಂ.ಮೀ. ಮಳೆ ಸುರಿದಿದ್ದರೆ, ಕರ್ನಾಟಕದ ಚಿರಾಪುಂಜಿ ಆಗುಂಬೆಯಲ್ಲಿ 9 ಸೆಂ.ಮೀ. ಮತ್ತು ಕುಂದಾಪುರದಲ್ಲಿ 7 ಸೆಂ.ಮೀ. ಮಳೆ ಸುರಿದಿದೆ.
ಉಳಿದಂತೆ ಪಣಂಬೂರು, ಕಾರ್ಕಳ, ಗೇರುಸೊಪ್ಪ, ಲಕ್ಕವಳ್ಳಿಯಲ್ಲಿ 6 ಸೆಂ.ಮೀ., ಶಿರಾಲಿ, ಮಂಕಿ, ಬ್ಯಾಡಗಿ, ಹಿರೇಕೇರೂರ್, ಗಂಗಾವತಿ, ಗಂಗಾವತಿ, ಲಿಂಗನಮಕ್ಕಿ, ಚಳ್ಳಕೆರೆ, ನಾಯಕನಹಟ್ಟಿಯಲ್ಲಿ 5 ಸೆಂ.ಮೀ., ಹೊಳಲ್ಕೆರೆ, ಕೊಪ್ಪಳ, ಹಿರಿಯೂರು, ಮೊಳಕಾಲ್ಮೂರು, ತಾಳಗುಪ್ಪದಲ್ಲಿ 4 ಸೆಂ.ಮೀ. ಮಳೆಯಾಗಿದೆ. ಶಿವಮೊಗ್ಗ, ಚಿತ್ರದುರ್ಗ, ರಾಮನಗರ ಜಿಲ್ಲೆಯಲ್ಲಿಯೂ ಸಾಕಷ್ಟು ಮಳೆಯಾಗಿದೆ.
ಕರಾವಳಿ, ಮಲೆನಾಡು, ದಕ್ಷಿಣ ಕರ್ನಾಟಕದಲ್ಲಿ ಸೂರ್ಯ ಕಣ್ಣಾಮುಚ್ಚಾಲೆಯಾಡುತ್ತಿದ್ದರೆ, ಉತ್ತರ ಕರ್ನಾಟಕದಲ್ಲಿ ಎಂದಿನಂತೆ ನಗುತ್ತಿದ್ದಾನೆ. ಗುಲಬರ್ಗದಲ್ಲಿ ಇಂದು ತಾಪಮಾನ 44 ಡಿಗ್ರಿ ಸೆಲ್ಶಿಯಸ್ ದಾಖಲಾಗಿದ್ದು, ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.
ತ.ನಾಡು, ಆಂಧ್ರದಲ್ಲಿ : ಗಂಟೆಗೆ 65ರಿಂದ 75 ಕಿ.ಮೀ. ವೇಗದಲ್ಲಿ ಬೀಸಿರುವ ಲೈಲಾ ಚಂಡಮಾರುತ ಆಂದ್ರಪ್ರದೇಶ ಮತ್ತು ತಮಿಳುನಾಡಿನ ಉತ್ತರ ಭಾಗದ ಕರಾವಳಿ ಪತರಗುಟ್ಟುವಂತೆ ಮಾಡಿದೆ. ಎರಡೂ ರಾಜ್ಯಗಳ ಪೂರ್ವ ಕರಾವಳಿಗುಂಟ ಭಾರೀ ಮಳೆಯಾಗುತ್ತಿದ್ದು ಸುಮಾರು 50 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ. ಆಂಧ್ರದಲ್ಲಿ ಮಳೆಗೆ 10 ಜನ ಮತ್ತು ತಮಿಳುನಾಡಿನಲ್ಲಿ 5 ಜನ ಪ್ರಾಣ ಕಳೆದುಕೊಂಡಿದ್ದಾರೆ. ಬಿರುಗಾಳಿಯ ವೇಗ ಇನ್ನೂ ಹೆಚ್ಚಲಿದ್ದು ಓರಿಸ್ಸಾ ಜನತೆಯನ್ನು ಕೂಡ ಎಚ್ಚರಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಆಂಧ್ರದ ಕೃಷ್ಣಾ ಗೋದಾವರಿ ಜಿಲ್ಲೆಯಲ್ಲಿ ರಿಲಾಯನ್ಸ್ ಕಂಪನಿ ಕಚ್ಚಾ ತೈಲೋತ್ಪಾದನೆಯನ್ನು ಸ್ಥಗಿತಗೊಳಿಸಿದೆ.
ಆದರೆ, ಮುಂಗಾರು ಪೂರ್ವ ಮಳೆ ಅಕ್ಕಿ ಬೆಳೆಯಲಾಗುವ ಪ್ರದೇಶದಲ್ಲಿ ವರದಾನವಾಗಿ ಪರಿಣಮಿಸಲಿದೆ ಎಂದು ಕೃಷಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ರೈತರು ಬಿತ್ತನೆಗಾಗಿ ಸಿದ್ಧತೆ ನಡೆಸುತ್ತಿದ್ದು ಮುಂದಿನ ತಿಂಗಳಿನಿಂದ ಭತ್ತ ಬಿತ್ತಲು ಈ ಮಲೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications