ಹಳೆಮನೆ ರಂಗಾಯಣದ ಹೊಸ ಸೂತ್ರಧಾರ

ರಂಗಾಯಣದ ನಿರ್ವಹಣೆಯ ಹೊಣೆ ರಂಗ ಸಮಾಜ ಎಂಬ ನೋಂದಾಯಿತ ಸಂಘದ ಮೇಲಿರುತ್ತದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ರಂಗ ಸಮಾಜದ ಅಧ್ಯಕ್ಷರಾಗಿರುತ್ತಾರೆ. ಸದ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇದರ ಅಧ್ಯಕ್ಷ. ನಿರ್ದೇಶಕರ ಅನುಪಸ್ಥಿತಿಯಲ್ಲಿ ಸರ್ಕಾರದ ಪರವಾಗಿ ಕಾತ ಚಿಕ್ಕಣ್ಣ ಅವರ ರಂಗಾಯಣದ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.
ಹಲವು ತಿಂಗಳಿಂದ ರಂಗಾಯಣದ ಅಂಗಳದಲ್ಲಿ ತೇಲುತ್ತಿದ್ದ ಅಂತೆ ಕಂತೆಗಳಿಗೆ, 2 ವರ್ಷದ 'ಅಧಿ ಕಾರಸ್ಥರ ಪರ್ವ'ಕ್ಕೆ ತೆರೆ ಬಿದ್ದಿದೆ. ತುರ್ತು ಸಭೆಯ ಆಹ್ವಾನದ ಮೇರೆಗೆ ಮಂಗಳವಾರ ಬೆಳಗ್ಗೆ ಸಭೆ ಸೇರಿದ 'ರಂಗ ಸಮಾಜ'ದ ಸದಸ್ಯರು ಹಳಮನೆ ಅವರ ಹೆಸರನ್ನು ನಿರ್ದೇಶಕ ಸ್ಥಾನಕ್ಕೆ ಶಿಫಾರಸು ಮಾಡಿದರು. ಪ್ರಕ್ರಿಯೆ ಪೂರ್ಣಗೊಳಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯ ಸಂಜೆ ಅಧಿಕೃತ ಆದೇಶ ಪ್ರಕಟಿಸಿತು. ಗುರುವಾರ (ಮೇ .20) ಬೆಳಗ್ಗೆ 11ಕ್ಕೆ ಹಳಮನೆ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ವ್ಯಕ್ತಿ ಪರಿಚಯ: ಬಹುರೂಪಿ ಪ್ರತಿಭೆ ಲಿಂಗದೇವರು
ನೈಪಥ್ಯಕ್ಕೆ ಜಯಶ್ರೀ: ಕಳೆದ ಜೂನ್ನಲ್ಲಿ ನಿರ್ದೇಶಕರಾಗಿದ್ದ ರಂಗಕರ್ಮಿ ಬಿ.ಜಯಶ್ರೀ ರಂಗಾಯಣದ ಪರಿಸರಕ್ಕೆ ಒಗ್ಗಿಕೊಳ್ಳುವುದರೊಳಗೆ ವಿವಾದಗಳು ಆವರಿಸಿ,ಆರೋಪ-ಪ್ರತ್ಯಾರೋಪದ 'ನಾಟಕ 'ನಡೆದು, ರಾಜೀನಾಮೆ ನೀಡಿ ತೆರಳಿದ್ದರು.
ನವೆಂಬರ್ 24ರಂದು ಹಳೆಮನೆ ನೇಮಕದ ಮಾತು ಕೇಳಿ ಬಂದಿತ್ತು. ರಂಗಾಯಣದ ನಿರ್ವಹಣೆ ಹೊಣೆ ಹೊತ್ತಿರುವ 'ರಂಗ ಸಮಾಜ'ದ ಸಭೆಯ ಅನುಮೋದನೆ ಪಡೆಯಲಿಲ್ಲ ಎನ್ನುವ ತಾಂತ್ರಿಕ ಕಾರಣಕ್ಕೆ ಆದೇಶದ ಹಂತದಲ್ಲಿ ತಡೆ ಬಿದ್ದಿತ್ತು. ಈಗ, ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ನೇಮಕ ಪ್ರಕ್ರಿಯೆಗೆ 'ತುರ್ತು' ಚಾಲನೆ ದೊರಯಿತು ಎಂದು ವಿಶ್ವಸನೀಯ ಮೂಲಗಳು
ತಿಳಿಸಿವೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications