ಹಳೆಮನೆ ರಂಗಾಯಣದ ಹೊಸ ಸೂತ್ರಧಾರ

ರಂಗಾಯಣದ ನಿರ್ವಹಣೆಯ ಹೊಣೆ ರಂಗ ಸಮಾಜ ಎಂಬ ನೋಂದಾಯಿತ ಸಂಘದ ಮೇಲಿರುತ್ತದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ರಂಗ ಸಮಾಜದ ಅಧ್ಯಕ್ಷರಾಗಿರುತ್ತಾರೆ. ಸದ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇದರ ಅಧ್ಯಕ್ಷ. ನಿರ್ದೇಶಕರ ಅನುಪಸ್ಥಿತಿಯಲ್ಲಿ ಸರ್ಕಾರದ ಪರವಾಗಿ ಕಾತ ಚಿಕ್ಕಣ್ಣ ಅವರ ರಂಗಾಯಣದ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.
ಹಲವು ತಿಂಗಳಿಂದ ರಂಗಾಯಣದ ಅಂಗಳದಲ್ಲಿ ತೇಲುತ್ತಿದ್ದ ಅಂತೆ ಕಂತೆಗಳಿಗೆ, 2 ವರ್ಷದ 'ಅಧಿ ಕಾರಸ್ಥರ ಪರ್ವ'ಕ್ಕೆ ತೆರೆ ಬಿದ್ದಿದೆ. ತುರ್ತು ಸಭೆಯ ಆಹ್ವಾನದ ಮೇರೆಗೆ ಮಂಗಳವಾರ ಬೆಳಗ್ಗೆ ಸಭೆ ಸೇರಿದ 'ರಂಗ ಸಮಾಜ'ದ ಸದಸ್ಯರು ಹಳಮನೆ ಅವರ ಹೆಸರನ್ನು ನಿರ್ದೇಶಕ ಸ್ಥಾನಕ್ಕೆ ಶಿಫಾರಸು ಮಾಡಿದರು. ಪ್ರಕ್ರಿಯೆ ಪೂರ್ಣಗೊಳಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯ ಸಂಜೆ ಅಧಿಕೃತ ಆದೇಶ ಪ್ರಕಟಿಸಿತು. ಗುರುವಾರ (ಮೇ .20) ಬೆಳಗ್ಗೆ 11ಕ್ಕೆ ಹಳಮನೆ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ವ್ಯಕ್ತಿ ಪರಿಚಯ: ಬಹುರೂಪಿ ಪ್ರತಿಭೆ ಲಿಂಗದೇವರು
ನೈಪಥ್ಯಕ್ಕೆ ಜಯಶ್ರೀ: ಕಳೆದ ಜೂನ್ನಲ್ಲಿ ನಿರ್ದೇಶಕರಾಗಿದ್ದ ರಂಗಕರ್ಮಿ ಬಿ.ಜಯಶ್ರೀ ರಂಗಾಯಣದ ಪರಿಸರಕ್ಕೆ ಒಗ್ಗಿಕೊಳ್ಳುವುದರೊಳಗೆ ವಿವಾದಗಳು ಆವರಿಸಿ,ಆರೋಪ-ಪ್ರತ್ಯಾರೋಪದ 'ನಾಟಕ 'ನಡೆದು, ರಾಜೀನಾಮೆ ನೀಡಿ ತೆರಳಿದ್ದರು.
ನವೆಂಬರ್ 24ರಂದು ಹಳೆಮನೆ ನೇಮಕದ ಮಾತು ಕೇಳಿ ಬಂದಿತ್ತು. ರಂಗಾಯಣದ ನಿರ್ವಹಣೆ ಹೊಣೆ ಹೊತ್ತಿರುವ 'ರಂಗ ಸಮಾಜ'ದ ಸಭೆಯ ಅನುಮೋದನೆ ಪಡೆಯಲಿಲ್ಲ ಎನ್ನುವ ತಾಂತ್ರಿಕ ಕಾರಣಕ್ಕೆ ಆದೇಶದ ಹಂತದಲ್ಲಿ ತಡೆ ಬಿದ್ದಿತ್ತು. ಈಗ, ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ನೇಮಕ ಪ್ರಕ್ರಿಯೆಗೆ 'ತುರ್ತು' ಚಾಲನೆ ದೊರಯಿತು ಎಂದು ವಿಶ್ವಸನೀಯ ಮೂಲಗಳು
ತಿಳಿಸಿವೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications