ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ಫಿ ಸುಧಾಮೂರ್ತಿಗೆ ಬಸವ ಶ್ರೀ ಪ್ರಶಸ್ತಿ

By Mahesh
|
Google Oneindia Kannada News

Basavashree award for Sudha Murtಹ್y
ಬೆಂಗಳೂರು, ಮೇ.20: ಪ್ರತಿವರ್ಷದಂತೆ ಬಸವ ಜಯಂತಿ ಆಚರಣೆ ಜೊತೆಗೆ ಬಸವ ಶ್ರೀ ಹಾಗೂ ವಚನ ಸಾಹಿತ್ಯ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬಸವ ವೇದಿಕೆ ಹಮ್ಮಿಕೊಂಡಿದೆ. ಬಸವ ತತ್ವ ಪರಿಪಾಲನೆ, ಸಮಾಜದ ಏಳಿಗೆಗಾಗಿ ಶ್ರಮಿಸಿದ ಸೃಜನ ಶೀಲರಿಗೆ ಪ್ರಥಮ ಬಾರಿಗೆ ಬಸವ ಶ್ರೀ ಮತ್ತು ವಚನ ಶ್ರೀ ಪ್ರಶಸ್ತಿಯನ್ನು ನೀಡುವ ಪರಿಕಲ್ಪನೆ ಜಾರಿಗೆ ತಂದ ಹಿರಿಮೆ ಬಸವ ವೇದಿಕೆಗೆ ಸಲ್ಲುತ್ತದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಕಾರ್ಯಕಾರಿ ಸದಸ್ಯ ಮತ್ತು ಸಾಹಿತಿ ಜರಗನಹಳ್ಳಿ ಶಿವಶಂಕರ್ ಅವರು ಹೇಳಿದರು.

2010 ನೇ ಸಾಲಿನ ಪ್ರತಿಷ್ಠಿತ ಬಸವ ಶ್ರೀ ಪ್ರಶಸ್ತಿಯನ್ನು ಇನ್‌ಫೋಸಿಸ್ ಪ್ರತಿಷ್ಠಾನದ ಸಂಸ್ಥಾಪಕಿ ಸುಧಾಮೂರ್ತಿ ಅವರಿಗೆ ನೀಡಲಾಗುವುದು. ವಚನ ಶ್ರೀ ಪ್ರಶಸ್ತಿಯನ್ನು ವಿದ್ವಾಂಸ ಹಿರಿಯ ಸಾಹಿತಿ ಪ್ರೊ.ಜಿ.ಎಸ್. ಸಿದ್ದಲಿಂಗಯ್ಯ ಅವರಿಗೆ ನೀಡಲಾಗುವುದು ಎಂದರು.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ.23 ರಂದು ಬೆಳಿಗ್ಗೆ 10.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕೋಡಿಮಠ ಸಂಸ್ಥಾಕ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸಮಾರಂಭವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿ ಬಸವ ಶ್ರೀ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ವಿಧಾನ ಪರಿಷತ್ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಅಧ್ಯಕ್ಷತೆ ವಹಿಸಲಿದ್ದು, ವಚನ ಸಾಹಿತ್ಯ ಶ್ರೀ ಪ್ರಶಸ್ತಿಯನ್ನು ಸಾರಿಗೆ ಸಚಿವ ಆರ್.ಅಶೋಕ್
ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ಪುರಸ್ಕೃತರ ಬಗ್ಗೆ ವಿಶೇಷ ಸಂಚಿಕೆಯನ್ನು ರಂಗತಜ್ಞೆ ಮತ್ತು ರಾಜ್ಯಸಭಾ ಸದಸ್ಯೆ ಬಿ.ಜಯಶ್ರೀ, ಮುಖ್ಯ ಅತಿಥಿಗಳಾಗಿ ಜಲಸಂಪನ್ಮೂಲ ಸಚಿವ ಬಸವರಾಜ ಎಸ್.ಬೊಮ್ಮಾಯಿ, ಮಾಜಿ ಸಚಿವ ವಿ.ಸೋಮಣ್ಣ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X