ಬಜ್ಪೆ ಏರ್ಪೋರ್ಟಲ್ಲಿ ಕವಿದ ಶೋಕದ ಕಾರ್ಮೋಡ

ಕರಾಳ ಶನಿವಾರದಂದು ಬೆಳಗಿನ ಜಾವ 6.40ಕ್ಕೆ ಸಂಭವಿಸಿದ ವಿಮಾನ ಅಪಘಾತ ಇಡೀ ರಾಜ್ಯದ ಮೇಲೆ ಶೋಕದ ಕಾರ್ಮೋಡ ಕವಿಯುವಂತೆ ಮಾಡಿದೆ. ದುಬೈನಿಂದ ಮಂಗಳೂರಿಗೆ ಆಗಮಿಸಿದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಚಿಕ್ಕದಾದ ರನ್ ವೇ ದಾಟಿ ನಿಯಂತ್ರಣ ತಾಳಲಾರದೆ ಬೆಟ್ಟದ ಮೇಲಿಂದ ತಗ್ಗಿಗೆ ಧುಮುಕಿ ನುಚ್ಚುನೂರಾಗಿದೆ, ಬೆಂಕಿಯ ಉಂಡೆಯಂತಾಗಿ 159 ಭಾರತೀಯರನ್ನು ಆಹುತಿ ತೆಗೆದುಕೊಂಡಿದೆ.
ಬದುಕಿದ ಅದೃಷ್ಟವಂತರು : ನೆಲಕ್ಕೆ ಅಪ್ಪಳಿಸುತ್ತಿದ್ದಂತೆ ಎರಡು ಭಾಗವಾಗಿ ತುಂಡಾದ ದುರ್ದೈವಿ ವಿಮಾನದಿಂದ ಕೆಲವರು ಧುಮುಕಿ ಪಾರಾಗಿದ್ದಾರೆ. ಉಳಿದವರಿಗೆ ಆ ಅದೃಷ್ಟವಿರಲಿಲ್ಲ. ಮರುಜನ್ಮ ಪಡೆದವರ ಹೆಸರುಗಳು ಇಂತಿವೆ : ಇಸ್ಮಾಯಿಲ್ ಅಬ್ದುಲ್ಲಾ ಪುತ್ತೂರು, ಜೋಯೆಲ್ ಪ್ರತಾಪ್ ಡಿಸೋಜಾ, ಜಿಕೆ ಪ್ರದೀಪ್, ಕೃಷ್ಣನ್ ಕೂಲಿಕುಣ್ಣು, ಮಾಯನ್ ಕುಟ್ಟಿ, ಉಮರ್ ಫರೂಕ್ ಮತ್ತು ಡಾ. ಸಬ್ರೀನಾ.
ಕಾಸರಗೋಡು, ಮಂಜೇಶ್ವರ, ಮಡಿಕೇರಿ, ಉಡುಪಿ ಮುಂತಾದ ಪ್ರದೇಶಕ್ಕೆ ಸೇರಿದ ಜನ ಮೃತರಾಗಿದ್ದಾರೆ. ಒಂದಿಬ್ಬರು ಕೆಲ ದಿನಗಳಲ್ಲಿ ಮದುವೆಯಾಗುವವರಿದ್ದರೆ, ಕೆಲವರು ಮದುವೆಗೆಂದು ದುಬೈನಿಂದ ಇಲ್ಲಿಗೆ ಆಗಮಿಸಿದ್ದರು. ವಿಮಾನದಲ್ಲಿದ್ದವರು ಯಾವ ರೀತಿ ಸುಟ್ಟು ಕರಕಲಾಗಿದ್ದರೆಂದರೆ ಗುರುತಿಸುವುದು ಅಸಾಧ್ಯದ ಮಾತಾಗಿತ್ತು. ಪಯಣ ಮಾಡಿದವರ ಪಟ್ಟಿಯಿಂದ ಸತ್ತವರ ಹೆಸರನ್ನು ಗುರುತಿಸಲಾಗಿದೆ. ಬೆಳಗಿನಿಂದ ಆರಂಭವಾಗಿದ್ದ ರಕ್ಷಣಾ ಕಾರ್ಯ ಸಂಜೆವರೆಗೂ ನಡೆಯುತ್ತಲೇ ಇದೆ. ಇಲ್ಲಿಯವರೆಗೆ 148 ಪ್ರಯಾಣಿಕರನ್ನು ವಿಮಾನದಿಂದ ಹೊರತೆಗೆಯಲಾಗಿದೆ. ಇನ್ನೂ ಕೆಲವರು ಸಿಲುಕಿಕೊಂಡಿದ್ದಾರೆ.
ರಾಜಕಾರಣಿಗಳ ದಂಡು : ಘಟನೆ ಸುದ್ದಿ ತಿಳಿಯುತ್ತಿದ್ದಂತೆ ರಾಜಕಾರಣಿಗಳ ದಂಡು ಬಜ್ಪೆಗೆ ಧಾವಿಸಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಪ್ರಫುಲ್ ಪಟೇಲ್, ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಮೊದಲು ಆಗಮಿಸಿದರೆ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಗೃಹ ಸಚಿವ ವಿಎಸ್ ಆಚಾರ್ಯ, ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಸಿಂಗ್ ನಂತರ ಆಗಮಿಸಿದರು.
ತನಿಖೆ, ಪರಿಹಾರ : ದುರಂತಕ್ಕೆ ಸಂಬಂಧಿಸಿದಂತೆ ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ ತನಿಖೆಗೆ ಆದೇಶಿಸಿದ್ದಾರೆ. ಬ್ಲಾಕ್ ಬಾಕ್ಸ್ ದೊರೆತ ನಂತರ ಮತ್ತು ತನಿಖೆ ನಡೆದ ನಂತರ ದುರಂತಕ್ಕೆ ನಿಖರ ಕಾರಣ ತಿಳಿಯಲಿದೆ ಎಂದಿದ್ದಾರೆ. ನಿಲ್ದಾಣ ಸುರಕ್ಷಣಾ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ಆರೋಪವನ್ನು ಪಟೇಲ್ ತಳ್ಳಿಹಾಕಿದ್ದಾರೆ. ಬಜ್ಪೆ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ್ದು ಎಂದಿರುವ ವಿಎಸ್ ಆಚಾರ್ಯ ಕೂಡ ತನಿಖೆಗೆ ಆದೇಶಿಸಿದ್ದಾರೆ. ಅಪಘಾತದ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘಟನೆಯಲ್ಲಿ ತೀರಿಕೊಂಡ ರಾಜ್ಯದ ಪ್ರಯಾಣಿಕರ ಕುಟುಂಬಕ್ಕೆ 2 ಲಕ್ಷ ರು. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ವೈಮಾನಿಕ ಸಮೀಕ್ಷೆ ನಡೆಸಿದ ಎಸ್ಎಂ ಕೃಷ್ಣ ಅವರು ಆಚಾರ್ಯ ನೀಡಿದ ಹೇಳಿಕೆಗೆ ವ್ಯತಿರಿಕ್ತವಾದ ಹೇಳಿಕೆ ನೀಡಿದ್ದಾರೆ. ಬಜ್ಪೆ ವಿಮಾನ ನಿಲ್ದಾಣದ ರನ್ ವೇ ಪೈಲಟ್ ಗಳಿಗೆ ಒಂದು ಸವಾಲೇ ಸರಿ ಎಂದಿದ್ದಾರೆ. ಅವರು ವಿವಿಧ ಆಸ್ಪತ್ರೆಗಳಿಗೆ ತೆರಳಿ ಗಾಯಾಳುಗಳನ್ನು ಸಂದರ್ಶಿಸಿ ಸಾಂತ್ವನ ಹೇಳಿದರು.
ಬಂಧುಗಳ ಆಕ್ರಂದನ : ಅಪಘಾತ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸಂಬಂಧಿಕರಿಗೆ ಆಘಾತ ಕಾದಿತ್ತು. ಯಾಕೆಂದರೆ, ದೇಹಗಳು ಯಾರೂ ಗುರುತಿಸುವ ಸ್ಥಿತಿಯಲ್ಲಿರಲಿಲ್ಲ. ಸತ್ತವರನ್ನು ಗುಡ್ಡೆ ಹಾಕಿ ನಂತರ ವೆನ್ ಲ್ಯಾಕ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿಯೂ ಕೂಡ ನೆರೆದಿದ್ದ ಸತ್ತವರ ಸಂಬಂಧಿಕರನ್ನು ಸಾಂತ್ವನ ಪಡಿಸುವುದು ಅಸಾಧ್ಯ ಮಾತಾಗಿತ್ತು. ರೋದನ, ಆಕ್ರಂದನ ಮುಗಿಲು ಮುಟ್ಟಿತ್ತು.
ಸಹಾಯವಾಣಿ ಸಂಖ್ಯೆ: 0824-2220 422, 011-25603101
* ಮಂಗಳೂರಿನಲ್ಲಿ ಭೀಕರ ವಿಮಾನ ಅಪಘಾತ
* ಬಜ್ಪೆಯಲ್ಲಿ ನಕರಸದೃಶ ವಾತಾವರಣ
* ಮಂಗಳೂರು ವಿಮಾನ ದುರಂತಕ್ಕೆ ಕಾರಣವೇನು?
* ದೇಶದ 11ನೇ ಅತಿದೊಡ್ಡ ವಿಮಾನ ದುರಂತವಿದು
* ಮದುವೆಗೆ ಬಂದು ಮಸಣ ಸೇರಿದರು
ವಿಡಿಯೋ
* ವಿಡಿಯೋ : ಬೆಂಕಿ ಉಂಡೆಯಂತಾದ ವಿಮಾನ
* ವಿಡಿಯೋ : ಪುಟ್ಟ ರನ್ ವೇ ಜಿಗಿದ ಏರ್ ಇಂಡಿಯಾ ವಿಮಾನ
* ವಿಡಿಯೋ : ದುರಂತಕ್ಕೆ ಪೈಲಟ್ ತಪ್ಪು ಕಾರಣ?
* ವಿಡಿಯೋ : ಮಂಗಳೂರು ವಿಮಾನ ದುರಂತದಲ್ಲಿ 160 ಸಾವು
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications