ಬಜ್ಪೆಯಲ್ಲಿ ನರಕಸದೃಶ ವಾತಾವರಣ
ಮಂಗಳೂರು, ಮೇ 22 : ಬಜ್ಪೆ ವಿಮಾನ ನಿಲ್ದಾಣದಲ್ಲಿ ನರಕಸದೃಶ ವಾತಾವರಣ ಸೃಷ್ಟಿಯಾಗಿದೆ. ದುರಂತದಲ್ಲಿ ಮಡಿದವರೆಲ್ಲ ಗುರುತು ಹಿಡಿಯಲಾರದಷ್ಟು ಸುಟ್ಟು ಕರಕಲಾಗಿದ್ದಾರೆ. ಮಡಿದವರ ಕುಟುಂಬದವರ ರೋದನವನ್ನಂತೂ ಮುಗಿಲು ಮುಟ್ಟಿದೆ.
ರನ್ ವೇ ದಾಟಿ ನೆಲಕ್ಕೆ ಅಪ್ಪಳಿಸುತ್ತಿದ್ದಂತೆ ಬೆಂಕಿಗೆ ಸಿಕ್ಕ ಪತಂಗದಂತೆ ವಿಮಾನ ಸುಟ್ಟು ಭಸ್ಮವಾಗಿದೆ. ಅಪಘಾತ ಸ್ಥಳಕ್ಕೆ ಧಾವಿಸಿದ ಸಂಬಂಧಿಕರು ತಮ್ಮವರ್ಯಾರಾದರೂ ಬದುಕಿದ್ದಾರೆಯೇ ಎಂದು ಕಾದವರಿಗೆ ನಿರಾಶೆ ಕಾದಿತ್ತು. ಜವರಾಯ ಬಹುತೇಕ ಜನರನ್ನು ತನ್ನತ್ತ ಸೆಳೆದಿದ್ದ.

ಸತ್ತವರಲ್ಲಿ 50 ಜನ ಕಾಸರಗೋಡಿನವರು, 10 ಮಂಜೇಶ್ವರದವರು ಸೇರಿದ್ದಾರೆ. ಮಡಿದವರಲ್ಲಿ ಉಡುಪಿ, ಮಡಿಕೇರಿಯವರು ಕೂಡ ಸೇರಿದ್ದಾರೆ. 70 ಜನರನ್ನು ಮಾತ್ರ ಸುಟ್ಟು ಭಸ್ಮವಾದ ವಿಮಾನದಿಂದ ಹೊರತೆಗೆಯಲಾಗಿದೆ. ಇನ್ನೂ 50 ಜನ ವಿಮಾನದಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಹೊರತೆಗೆಯಲು ರಕ್ಷಣಾ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಸತ್ತವರಲ್ಲಿ 105 ಜನ ಗಂಡಸರು, 32 ಹೆಂಗಸರು, 19 ಮಕ್ಕಳಲ್ಲಿ 4 ಜನ ಹಸುಗೂಸುಗಳೂ ಸೇರಿವೆ.
ಬದುಕುಳಿದವರು : ಈ ಭೀಕರ ದುರಂತದಲ್ಲಿ 6 ಜನ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಅವರನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿದೆ. ಬದುಕುಳಿದವರನ್ನು ಗುರುತಿಸಲಾಗಿದ್ದು ಅವರ ಹೆಸರುಗಳು ಹೀಗಿವೆ : ಡಾ. ಸಬ್ರೀನಾ, ಮಹ್ಮದ್ ಕುಂಞ, ಪ್ರದೀಪ್, ಕಿಶೋರ್, ಉಮರ್ ಫಾರೂಕ್.
ಸಹಾಯವಾಣಿ ಸಂಖ್ಯೆ: 0824-2220 422, 011-25603101
* ಬಜ್ಪೆಯಲ್ಲಿ ನಕರಸದೃಶ ವಾತಾವರಣ
* ವಿಮಾನ ಅಪಘಾತ; ಮಳೆಯ ನಡುವೆ ರಕ್ಷಣಾ ಕಾರ್ಯ
* ಅಪಘಾತಕ್ಕೀಡಾದ ವಿಮಾನ ಪೈಲಟ್ ಝೆಡ್ ಗ್ಲೂಸಿಯಾ
ವಿಡಿಯೋ
* ವಿಡಿಯೋ : ಬೆಂಕಿ ಉಂಡೆಯಂತಾದ ವಿಮಾನ
* ವಿಡಿಯೋ : ಪುಟ್ಟ ರನ್ ವೇ ಜಿಗಿದ ಏರ್ ಇಂಡಿಯಾ ವಿಮಾನ
* ವಿಡಿಯೋ : ದುರಂತಕ್ಕೆ ಪೈಲಟ್ ತಪ್ಪು ಕಾರಣ?
* ವಿಡಿಯೋ : ಮಂಗಳೂರು ವಿಮಾನ ದುರಂತದಲ್ಲಿ 160 ಸಾವು
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications