ಮೃತರ ಕುಟುಂಬಕ್ಕೆ ರು.2 ಲಕ್ಷ ಪರಿಹಾರ ಘೋಷಣೆ

ಯುಪಿಎ ಸರಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಶನಿವಾರ ಸಂಜೆ ನಡೆಯಬೇಕಾಗಿದ್ದ ಸಮಾರಂಭವನ್ನು ವಿಮಾನ ದುರಂತ ನಡೆದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ವಿಮಾನ ದುರಂತದಲ್ಲಿ ಗಾಯಗೊಂಡವರಿಗೆ ತಲಾ ರು.50 ಸಾವಿರ ಪರಿಹಾರ ಧನವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಘೋಷಿಸಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ರಕ್ಷಣಾ ಕಾರ್ಯದ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ನಾಗರಿಕ ವಿಮಾನಯಾನ ಸಚಿವ ಪ್ರಪುಲ್ ಪಟೇಲ್ ಹಾಗೂ ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಅವರೊಂದಿಗೆ ಪ್ರಧಾನಿಗಳು ದೂರವಾಣಿ ಮುಖಾಂತರ ಮಾತನಾಡಿ ವಿವರಗಳನ್ನು ತಿಳಿದುಕೊಂಡರು.












Click it and Unblock the Notifications