ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೃತರ ಕುಟುಂಬಕ್ಕೆ ರು.2 ಲಕ್ಷ ಪರಿಹಾರ ಘೋಷಣೆ

By Rajendra
|
Google Oneindia Kannada News

Rs 2 lakh compensation for crash victims
ನವದೆಹಲಿ, ಮೇ.22: ಮಂಗಳೂರಿನಲ್ಲಿ ಶನಿವಾರ ಮುಂಜಾನೆ ನಡೆದ ಭೀಕರ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತದ ಬಗ್ಗೆ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ರು.2 ಲಕ್ಷ ಪರಿಹಾರ ಧನವನ್ನು ಪ್ರಧಾನಿ ಇಂದು ಘೋಷಿಸಿದರು.

ಯುಪಿಎ ಸರಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಶನಿವಾರ ಸಂಜೆ ನಡೆಯಬೇಕಾಗಿದ್ದ ಸಮಾರಂಭವನ್ನು ವಿಮಾನ ದುರಂತ ನಡೆದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ವಿಮಾನ ದುರಂತದಲ್ಲಿ ಗಾಯಗೊಂಡವರಿಗೆ ತಲಾ ರು.50 ಸಾವಿರ ಪರಿಹಾರ ಧನವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಘೋಷಿಸಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ರಕ್ಷಣಾ ಕಾರ್ಯದ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ನಾಗರಿಕ ವಿಮಾನಯಾನ ಸಚಿವ ಪ್ರಪುಲ್ ಪಟೇಲ್ ಹಾಗೂ ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಅವರೊಂದಿಗೆ ಪ್ರಧಾನಿಗಳು ದೂರವಾಣಿ ಮುಖಾಂತರ ಮಾತನಾಡಿ ವಿವರಗಳನ್ನು ತಿಳಿದುಕೊಂಡರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X