ವಿಮಾನ ದುರಂತ : ತಲಾ 10 ಲಕ್ಷ ರು. ಪರಿಹಾರ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಾದವ್, ಘಟನೆಯಲ್ಲಿ 158 ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲಿ 146 ಮೃತದೇಹಗಳನ್ನು ಗುರುತಿಸಲಾಗಿದೆ. 12 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಆದರೆ, ಮೃತಪಟ್ಟಿರುವ ಎಲ್ಲ 158 ದೇಹಗಳನ್ನು ದೊರೆತಿವೆ. 87 ದೇಹಗಳನ್ನು ಮೃತರ ಸಂಬಂಧಿಕರಿಗೆ ನೀಡಲಾಗಿದೆ ಎಂದರು.
ಈಗಾಗಲೇ ಪ್ರಧಾನಮಂತ್ರಿಗಳು ಘೋಷಣೆ ಮಾಡಿದಂತೆ ಮೃತರಿಗೆ ತಲಾ ಏರಡು ಲಕ್ಷ ಹೊರತುಪಡಿಸಿ ಸತ್ತವರು ವಯಸ್ಕರಾಗಿದ್ದರೆ ಅಂತವರ ಕುಟುಂಬಕ್ಕೆ 10 ಲಕ್ಷ ರುಪಾಯಿ ಮಧ್ಯಂತರ ಪರಿಹಾರ ನೀಡಲಾಗುವುದು. 12 ವರ್ಷದೊಳಗಿನ ಮಕ್ಕಳಿಗೆ 5 ಲಕ್ಷ ರುಪಾಯಿ ಮತ್ತು 2 ಲಕ್ಷ ರುಪಾಯಿ ಗಾಯಗೊಂಡವರ ಕುಟುಂಬಗಳಿಗೆ ನೀಡಲಾಗುವುದು ಜಾದವ್ ಸ್ಪಷ್ಟಪಡಿಸಿದರು.
ಘಟನೆಗೆ ತೀವ್ರ ನೋವು ವ್ಯಕ್ತಪಡಿಸಿದ ಜಾದವ್, ಮೇಲ್ನೋಟಕ್ಕೆ ಪೈಲೆಟ್ ನ ಅಚಾತುರ್ಯವೇ ಕಾರಣ ಎಂದು ತಿಳಿದು ಬಂದಿದೆ. ಆದರೆ, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯಲಿದೆ. ಈ ಘಟನೆ ಬಗ್ಗೆ ಏರ್ ಇಂಡಿಯಾ ಸಮೂಹ ತೀವ್ರ ನೊಂದಿದೆ ಎಂದು ಅವರು ಹೇಳಿದರು. ವಿಮಾನ ಅಪಘಾತ ಮಾಹಿತಿ ತಿಳಿದ ತಕ್ಷಣ ಮಂಗಳೂರು ಹಾಗೂ ಸುತ್ತಮುತ್ತಲಿನ ಜನರು ಪರಿಹಾರಕ್ಕೆ ಕೈಜೋಡಿಸಿದ್ದಕ್ಕೆ ತುಂಬಾ ಸಂತಸ ವ್ಯಕ್ತಪಡಿಸಿದ ಅವರು, ಸ್ವಯಂ ಘೋಷಿತವಾಗಿ ಜನರು ಬಂದು ಪರಿಹಾರ ಕಾರ್ಯಕ್ಕೆ ನೆರವಾದರು. ಮೃತರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿರುತ್ತೇವೆ ಎಂದು ಜಾದವ್ ವಿವರಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications