ಡಿಎನ್ಎ ಪರೀಕ್ಷೆ ಬೇಡಾಂದ್ರೆ ಬೇಡ : ಹಾಲಪ್ಪ

ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ವೆಂಕಟೇಶ್ ಮೂರ್ತಿ ಅವರ ಪತ್ನಿ ಚಂದ್ರಾವತಿ ಧರಿಸಿದ್ದ ಬಟ್ಟೆಗಳ ಮೇಲೆ ಇರುವ ರಕ್ತದ ಕಲೆಗಳು ಯಾರದ್ದು ಎಂಬುದು ಮೊದಲು ಪತ್ತೆಯಾಗಬೇಕು. ಅದನ್ನು ಪತ್ತೆ ಮಾಡುವ ಬದಲು ತಮ್ಮನ್ನು ಡಿಎನ್ಎ ಪರೀಕ್ಷೆ ಒಳಪಡಿಸುವುದು ಸರಿಯಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಅತ್ಯಾಚಾರಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಹಾಲಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸುಭಾಷ್ ಬಿ ಆದಿ ಅವರು ಬುಧವಾರಕ್ಕೆ ಮುಂದೂಡಿದ್ದಾರೆ.
ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಹಾಲಪ್ಪ ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸದ್ಯದಲ್ಲೇ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ಅಧೀಕ್ಷಕ ಡಾ ಬಿ ಜಿ ತಿಲಕ್ ತಿಳಿಸಿದ್ದಾರೆ.











Click it and Unblock the Notifications