Get Updates
Get notified of breaking news, exclusive insights, and must-see stories!

ರೆಡ್ಡಿ ಪದೇ ಪದೇ ಕೋರ್ಟ್ ಗೆ ಚಕ್ಕರ್

G Janardhan Reddy
ಬಳ್ಳಾರಿ, ಮೇ.25: ಕರ್ನಾಟಕ - ಆಂಧ್ರದ ಗಡಿಕಲ್ಲುಗಳನ್ನು ಧ್ವಂಸ ಮಾಡಿದ್ದಲ್ಲದೇ ಗಣಿಯ ಗಡಿಗಳನ್ನು ಹಾಳು ಮಾಡಿದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಿ. ಜನಾರ್ದನ ರೆಡ್ಡಿ ಮತ್ತಿತರರ ಮೇಲಿನ ಆರೋಪಗಳ ಪ್ರಕರಣಗಳ ಕೈಬಿಡುವ ವಿಚಾರಣೆಯನ್ನು ಸಂಡೂರು ಜೆಎಂಎಫ್ಸಿ ನ್ಯಾಯಾಲಯ ಜೂನ್ 26ಕ್ಕೆ ಮುಂದೂಡಿದೆ.

ಸಚಿವರಾದ ಜಿ.ಜನಾರ್ದನರೆಡ್ಡಿ, ಬಿ.ಶ್ರೀರಾಮುಲು, ಜಿ.ಕರುಣಾಕರರೆಡ್ಡಿ ಅವರ ಮೇಲಿನ ಎಲ್ಲಾ ಮೊಕದ್ದಮೆಗಳನ್ನು ಕೈಬಿಡಲು ಸಚಿವ ಸಂಪುಟ ನಿರ್ಧರಿಸಿತ್ತು. ಈ ಹಿನ್ನಲೆಯಲ್ಲಿ ಗಣಿ ಗುತ್ತಿಗೆದಾರ ಟಪಾಲ್ ನಾರಾಯಣರೆಡ್ಡಿ ಸಲ್ಲಿಸಿದ್ದ ಗಡಿ ಕಲ್ಲುಗಳ ಧ್ವಂಸ ಮತ್ತು ಗಣಿ ಗಡಿಗಳನ್ನು ಹಾಳು ಮಾಡಿರುವ ಪ್ರಕರಣವನ್ನು ಕೂಡ ಕೈಬಿಡಬೇಕು ಎಂದು ಸರ್ಕಾರಿ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಸರ್ಕಾರಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿ ತಾವು ದಾಖಲಿಸಿರುವುದು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಆಗಿರುವ ಕಾರಣ ಸದರಿ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆಯಲು ಸಾಧ್ಯವಿಲ್ಲ ಎಂದು ಅರ್ಜಿದಾರ ಟಪಾಲ್ ನಾರಾಯಣರೆಡ್ಡಿ ಅವರ ಪರ ವಕೀಲ ಗುಡೇಕೋಟೆ ನಾಗರಾಜ್ ವಾದಿಸಿದ್ದರು. ಈ ಕುರಿತು ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಜನಾರ್ದನರೆಡ್ಡಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಪ್ರತೀ ಬಾರಿಯೂ (ಸುಮಾರು 4 ಬಾರಿ) ಅವರು ನ್ಯಾಯಾಲಯಕ್ಕೆ ಹಾಜರಾಗುತ್ತಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+