ಮೆಡಿಕಲ್ ಸೀಟು, ಪಿಯು ಶುಲ್ಕ ಹೆಚ್ಚಳ

ಸರ್ಕಾರಿ ಕಾಲೇಜು, ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ ನಿವಾರಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ತಳೆದಿದೆ. ಖಾಸಗಿ ಕಾಲೇಜುಗಳಲ್ಲಿನ ಮೂಲ ಸೌಲಭ್ಯಗಳನ್ನು ಭಾರತೀಯ ವೈದ್ಯಕೀಯ ಪರಿಷತ್ತಿನ ಪರಿಶೀಲನಾ ವರದಿ ಆಧರಿಸಿ ಖಾಸಗಿ ಕಾಲೇಜುಗಳಲ್ಲಿ ಸೀಟು ಹೆಚ್ಚಳ ಮಾಡಬಹುದಾಗಿದೆ ಎಂದರು.
ಸದ್ಯ ರಾಜ್ಯದ 10 ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಖಾಸಗಿ ಕಾಲೇಜುಗಳಿಂದ ಒಟ್ಟು 3805 ಸೀಟುಗಳು ಲಭ್ಯವಿದೆ. ಈ ಪೈಕಿ 172 ಸೀಟು ಕೇಂದ್ರ ಸರ್ಕಾರದ ಕೋಟಾ, 1822 ರಾಜ್ಯ ಸರ್ಕಾರಿ ಕೋಟಾ ಹಾಗೂ 1815 ಸೀಟು ಆಡಳಿತ ಮಂಡಳಿ ಕೋಟಾ ಎಂದು ಸಚಿವರು ವಿವರಿಸಿದರು.
ಬಂಡವಾಳ ಹೂಡಿಕೆ: ಬೆಂಗಳೂರಿನಲ್ಲಿ ಆಸ್ಪತ್ರೆ ಆರಂಭಿಸಲು ಮುಂದೆಬರುವವರಿಗೆ ದೇವನಹಳ್ಳಿ ಬಳಿ ಭೂಮಿ ನೀಡಲಾಗುವುದು ಎಂದರು. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆ ಹಾಗೂ ಕಿದ್ವಾಯಿ ಆಸ್ಪತ್ರೆ ಮೇಲಿನ ಒತ್ತಡ ಕಡಿಮೆ ಮಾಡುವ ಸಲುವಾಗಿ ಮೈಸೂರು, ಹುಬ್ಬಳ್ಳಿ ಹಾಗೂ ಗುಲ್ಬರ್ಗಾಗಳಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಶಾಖೆಗಳನ್ನು ತೆರೆಯಲಾಗುವುದು.
ಸದ್ಯದಲ್ಲೇ ಮೈಸೂರಿನಲ್ಲಿ 20 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ಶಾಖೆ ಆರಂಭವಾಗಲಿದೆ. ಜತೆಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಕಟ್ಟಡವನ್ನು ವಿಸ್ತರಣೆ ಮಾಡುವ ಮೂಲಕ 150 ಹಾಸಿಗೆಗಳಿಗೆ ಸಾಮರ್ಥ್ಯ ಹೆಚ್ಚಿಸಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರತಿಷ್ಠಾನ ಮುಂದೆ ಬಂದಿದೆ ಎಂದು ಸಚಿವ ರಾಮಚಂದ್ರಗೌಡ ತಿಳಿಸಿದರು.
ಪ್ರವೇಶ ಶುಲ್ಕ ವಿವರ:
ಎಂಬಿಬಿಎಸ್ :16,700ರು.
ದಂತ ವೈದ್ಯಕೀಯ : 14,400ರು.
ಸಿಇಟಿ ಮೂಲಕ ಖಾಸಗಿ ಕಾಲೇಜುಗಳಲ್ಲಿ
ಎಂಬಿಬಿಎಸ್ : 35 ಸಾವಿರ ರು.
ದಂತ ವೈದ್ಯಕೀಯ : 25 ಸಾವಿರ ರು.
ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಕೋಟಾ
ಎಂಬಿಬಿಎಸ್ : 3.25 ಲಕ್ಷ ರು.
ದಂತ ವೈದ್ಯಕೀಯ : 2.30 ಲಕ್ಷ ರು.
ಪಿಯು ಪ್ರವೇಶಶುಲ್ಕ ಹೆಚ್ಚಳ: ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಪಿಯು ಪ್ರವೇಶ ಶುಲ್ಕ ಹೆಚ್ಚಳ ಮಾಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಎರಡೂ ವರ್ಷದ ಪರೀಕ್ಷಾ ಶುಲ್ಕದಲ್ಲೂ ಕೊಂಚ ಮಟ್ಟಿನ ಹೆಚ್ಚಳ ಮಾಡಲಾಗಿದೆ ಎಂದು ಇಲಾಖೆ ಉನ್ನತ ಮೂಲಗಳು ತಿಳಿಸಿವೆ.
ಶುಲ್ಕ ವಿವರ:
ಸರ್ಕಾರಿ ಕಾಲೇಜುಗಳಲ್ಲಿ: ಬೋಧನಾ ಶುಲ್ಕ 420 ರು.
ಖಾಸಗಿ ಕಾಲೇಜುಗಳಲ್ಲಿ ಬೋಧನಾ ಶುಲ್ಕ 840 ರು.
ದಾಖಲಾತಿ ಶುಲ್ಕ:21 ರು.
ವಿಶೇಷ ದಾಖಲಾತಿ ಶುಲ್ಕ 420 ರು.
ವಿಶೇಷ ವಿಳಂಬ ಶುಲ್ಕ 1,400 ರು.
ಕ್ರೀಡಾ ಶುಲ್ಕ 70 ರು.
ಪಠ್ಯೇತರ ಮತ್ತು ಸಾಂಸ್ಕೃತಿಕ ಶುಲ್ಕ 56 ರು.
ಗ್ರಂಥಾಲಯ ಶುಲ್ಕ 100 ರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications