ಮೆಡಿಕಲ್ ಸೀಟು, ಪಿಯು ಶುಲ್ಕ ಹೆಚ್ಚಳ

ಸರ್ಕಾರಿ ಕಾಲೇಜು, ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ ನಿವಾರಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ತಳೆದಿದೆ. ಖಾಸಗಿ ಕಾಲೇಜುಗಳಲ್ಲಿನ ಮೂಲ ಸೌಲಭ್ಯಗಳನ್ನು ಭಾರತೀಯ ವೈದ್ಯಕೀಯ ಪರಿಷತ್ತಿನ ಪರಿಶೀಲನಾ ವರದಿ ಆಧರಿಸಿ ಖಾಸಗಿ ಕಾಲೇಜುಗಳಲ್ಲಿ ಸೀಟು ಹೆಚ್ಚಳ ಮಾಡಬಹುದಾಗಿದೆ ಎಂದರು.
ಸದ್ಯ ರಾಜ್ಯದ 10 ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಖಾಸಗಿ ಕಾಲೇಜುಗಳಿಂದ ಒಟ್ಟು 3805 ಸೀಟುಗಳು ಲಭ್ಯವಿದೆ. ಈ ಪೈಕಿ 172 ಸೀಟು ಕೇಂದ್ರ ಸರ್ಕಾರದ ಕೋಟಾ, 1822 ರಾಜ್ಯ ಸರ್ಕಾರಿ ಕೋಟಾ ಹಾಗೂ 1815 ಸೀಟು ಆಡಳಿತ ಮಂಡಳಿ ಕೋಟಾ ಎಂದು ಸಚಿವರು ವಿವರಿಸಿದರು.
ಬಂಡವಾಳ ಹೂಡಿಕೆ: ಬೆಂಗಳೂರಿನಲ್ಲಿ ಆಸ್ಪತ್ರೆ ಆರಂಭಿಸಲು ಮುಂದೆಬರುವವರಿಗೆ ದೇವನಹಳ್ಳಿ ಬಳಿ ಭೂಮಿ ನೀಡಲಾಗುವುದು ಎಂದರು. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆ ಹಾಗೂ ಕಿದ್ವಾಯಿ ಆಸ್ಪತ್ರೆ ಮೇಲಿನ ಒತ್ತಡ ಕಡಿಮೆ ಮಾಡುವ ಸಲುವಾಗಿ ಮೈಸೂರು, ಹುಬ್ಬಳ್ಳಿ ಹಾಗೂ ಗುಲ್ಬರ್ಗಾಗಳಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಶಾಖೆಗಳನ್ನು ತೆರೆಯಲಾಗುವುದು.
ಸದ್ಯದಲ್ಲೇ ಮೈಸೂರಿನಲ್ಲಿ 20 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ಶಾಖೆ ಆರಂಭವಾಗಲಿದೆ. ಜತೆಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಕಟ್ಟಡವನ್ನು ವಿಸ್ತರಣೆ ಮಾಡುವ ಮೂಲಕ 150 ಹಾಸಿಗೆಗಳಿಗೆ ಸಾಮರ್ಥ್ಯ ಹೆಚ್ಚಿಸಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರತಿಷ್ಠಾನ ಮುಂದೆ ಬಂದಿದೆ ಎಂದು ಸಚಿವ ರಾಮಚಂದ್ರಗೌಡ ತಿಳಿಸಿದರು.
ಪ್ರವೇಶ ಶುಲ್ಕ ವಿವರ:
ಎಂಬಿಬಿಎಸ್ :16,700ರು.
ದಂತ ವೈದ್ಯಕೀಯ : 14,400ರು.
ಸಿಇಟಿ ಮೂಲಕ ಖಾಸಗಿ ಕಾಲೇಜುಗಳಲ್ಲಿ
ಎಂಬಿಬಿಎಸ್ : 35 ಸಾವಿರ ರು.
ದಂತ ವೈದ್ಯಕೀಯ : 25 ಸಾವಿರ ರು.
ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಕೋಟಾ
ಎಂಬಿಬಿಎಸ್ : 3.25 ಲಕ್ಷ ರು.
ದಂತ ವೈದ್ಯಕೀಯ : 2.30 ಲಕ್ಷ ರು.
ಪಿಯು ಪ್ರವೇಶಶುಲ್ಕ ಹೆಚ್ಚಳ: ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಪಿಯು ಪ್ರವೇಶ ಶುಲ್ಕ ಹೆಚ್ಚಳ ಮಾಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಎರಡೂ ವರ್ಷದ ಪರೀಕ್ಷಾ ಶುಲ್ಕದಲ್ಲೂ ಕೊಂಚ ಮಟ್ಟಿನ ಹೆಚ್ಚಳ ಮಾಡಲಾಗಿದೆ ಎಂದು ಇಲಾಖೆ ಉನ್ನತ ಮೂಲಗಳು ತಿಳಿಸಿವೆ.
ಶುಲ್ಕ ವಿವರ:
ಸರ್ಕಾರಿ ಕಾಲೇಜುಗಳಲ್ಲಿ: ಬೋಧನಾ ಶುಲ್ಕ 420 ರು.
ಖಾಸಗಿ ಕಾಲೇಜುಗಳಲ್ಲಿ ಬೋಧನಾ ಶುಲ್ಕ 840 ರು.
ದಾಖಲಾತಿ ಶುಲ್ಕ:21 ರು.
ವಿಶೇಷ ದಾಖಲಾತಿ ಶುಲ್ಕ 420 ರು.
ವಿಶೇಷ ವಿಳಂಬ ಶುಲ್ಕ 1,400 ರು.
ಕ್ರೀಡಾ ಶುಲ್ಕ 70 ರು.
ಪಠ್ಯೇತರ ಮತ್ತು ಸಾಂಸ್ಕೃತಿಕ ಶುಲ್ಕ 56 ರು.
ಗ್ರಂಥಾಲಯ ಶುಲ್ಕ 100 ರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications