Get Updates
Get notified of breaking news, exclusive insights, and must-see stories!

ಗಂಡನಿಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪತ್ನಿ

Crimebeat
ಬೆಂಗಳೂರು, ಮೇ. 26 : ಕೌಟುಂಬಿಕ ಕಲಹದಿಂದ ಕೋಪಗೊಂಡು ಉದ್ರಿಕ್ತಳಾದ ನವವಿವಾಹಿತೆಯೊಬ್ಬಳು ಪತಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಬೆಂಗಳೂರಿನ ಕಮಲಾನಗರದಲ್ಲಿ ಸೋಮವಾರ ರಾತ್ರಿ (ಮೇ 25) ವರದಿಯಾಗಿದೆ. ತೀವ್ರ ಸುಟ್ಟ ಗಾಯಗಳಿಂದ ಅಸ್ವಸ್ಥನಾಗಿರುವ ಪತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಗರಾಜ್ ಬೆಂಕಿ ಪಾಲಾದ ನತದೃಷ್ಟಿ ಪತಿ. ಕೇವಲ ಎರಡು ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಈ ಜೋಡಿಗಳ ನಡುವೆ ಆಗಾಗ ಜಗಳವಾಗುತ್ತಿತ್ತು. ಸೋಮವಾರ ರಾತ್ರಿ ಜಗಳವಾದ ಸಂದರ್ಭದಲ್ಲಿ ಕೋಪಗೊಂಡ ಪತ್ನಿ ವೇದಾವತಿ ಎಂಬುವವರು ಪತಿ ನಾಗರಾಜ್ ಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ.

ಬೆಂಕಿಯ ಉರಿ ತಾಳಲಾರದೆ ನಾಗರಾಜ್ ಕೂಗಿಕೊಂಡಾಗ ನೆರೆಹೊರೆಯವರು ಈತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈತನ ಪರಿಸ್ಥಿತಿ ಗಂಭೀರವಾಗಿದೆ. ಬಸವೇಶ್ವರ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನವವಿವಾಹಿತೆ ವೇದಾವತಿಯನ್ನು ಪೊಲೀಸರು ಬಂಧಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+