ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಹೊಗೇನಕಲ್ ವಿವಾದಕ್ಕೆ ಶೀಘ್ರ ಮುಲಾಮು
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಹೋರಾಟದಿಂದ ಹೊಗೇನಕಲ್ ವಿವಾದ ಬಗೆಹರಿಯುವುದಿಲ್ಲ. ರಾಜ್ಯಗಳು ಸ್ನೇಹ ಸೌಹಾರ್ದತೆಯಿಂದ ಮಾತುಕತೆ ನಡೆಸಿ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳಬೇಕಿದೆ ಎಂದರು. ಹೊಗೇನಕಲ್ ವಿವಾದವನ್ನು ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಈಗಾಗಲೇ ಪ್ರಧಾನಮಂತ್ರಿಯವರಿಗೆ ಪತ್ರ ಬರೆದಿದ್ದಾರೆ ಎಂದು ಹೇಳಿದರು.
ಸರಕಾರ ನೀಡಿದ್ದ ಭರವಸೆಯಂತೆ ರೈತರ ಮೇಲಿದ್ದ ಮೊಕದ್ದಮೆಗಳನ್ನು ವಾಪಸ್ಸು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ. ಅದೇ ರೀತಿ ಕನ್ನಡ ಪರ ಹೋರಾಟಗಾರರ ಮೇಲಿರುವ ಕೇಸ್ ಗಳನ್ನು ವಾಪಸ್ಸು ಪಡೆಯುವ ಬಗ್ಗೆ ಸಹಾನುಭೂತಿಯಿಂದ ಪರಿಶೀಲನೆ ನಡೆಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
Comments
ಯಡಿಯೂರಪ್ಪ ಹೊಗೇನಕಲ್ ತಮಿಳುನಾಡು ಕರುಣಾನಿಧಿ ಕರವೇ ಮೊಕದ್ದಮೆ ಹೊಗೇನಕಲ್ ವಿವಾದ yediyurappa hogenakkal tamil nadu karunanidhi karave
Story first published: Wednesday, May 26, 2010, 10:53 [IST]