ಶೋಭಕ್ಕ ಗೃಹಮಂತ್ರಿಯಂತೆ ? ಹೌದಾ!

ಸಂಪುಟದಲ್ಲಿ ಈಗಾಗಲೇ ಮೂರು ಸ್ಥಾನಗಳು ಖಾಲಿ ಇವೆ. ಗೃಹ ಸಚಿವ ಆಚಾರ್ಯ ಅವರನ್ನು ದೆಹಲಿಗೆ ದಬ್ಬುವ ಕಾರ್ಯ ಶುರುವಾಗಿದೆ. ಈ ಸ್ಥಾನದಲ್ಲಿ ಶೋಭಾ ಕರಂದ್ಲಾಜೆ ಅವರನ್ನು ತರಲು ಮುಖ್ಯಮಂತ್ರಿ ಯಡಿಯೂರಪ್ಪ ಟೊಂಕ ಕಟ್ಟಿ ನಿಂತಿದ್ದಾರೆ ಎನ್ನುವ ಸುದ್ದಿ ವಿಧಾನಸೌಧದ ಮೊಗಸಾಲೆ ಕೇಳಿ ಬರತೊಡಗಿದೆ. ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಹೇಳುತ್ತಾ ಬಂದಿರುವ ಮುಖ್ಯಮಂತ್ರಿ, ಸದ್ದಿಲ್ಲದೇ ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳಬೇಕು ಎಂಬ ಚಿಂತನೆ ನಡೆಸಿದ್ದಾರೆ.
ಸಂಪುಟದಲ್ಲಿ ಒಬ್ಬೇ ಒಬ್ಬ ಮಹಿಳೆಗೆ ಸ್ಥಾನ ಕಲ್ಪಿಸದಿರುವ ಕಾರಣ ಅನೇಕ ಟೀಕೆ ಟಿಪ್ಪಣಿಗಳನ್ನು ಯಡಿಯೂರಪ್ಪ ಎದುರಿಸಬೇಕಾಗಿದೆ. ಇದ್ದೊಬ್ಬ ಸಮರ್ಥ ಮಂತ್ರಿ ಶೋಭಾ ಕರಂದ್ಲಾಜೆ ಅವರಿಂದ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ರಾಜೀನಾಮೆ ಪಡೆದುಕೊಂಡಿದ್ದರು. ಇದೀಗ ಮತ್ತೆ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. ಜೂನ್ ತಿಂಗಳ 15ರೊಳಗೆ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ.
ಇದರ ಜೊತೆಗೆ ಸಂಪುಟದಲ್ಲಿ ಕೆಲಸ ಮಾಡದಿರುವ ಸೋಮಾರಿ ಸಚಿವರನ್ನು ಕೈಬಿಡಲು ಸಿಎಂ ಮುಖಂಡರೊಂದಿಗೆ ಚರ್ಚೆ ನಡೆಸಿದ್ದಾರೆ. ಕನಿಷ್ಠ ನಾಲ್ಕಾರು ಮಂದಿಯನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಕೊಡಬೇಕು ಎನ್ನುವ ಆಲೋಚನೆಯೂ ಯಡಿಯೂರಪ್ಪ ಅವರದಾಗಿದೆ. ಆದರೆ, ರೆಡ್ಡಿಗಳ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಜಗದೀಶ್ ಶೆಟ್ಟರ್ ಕೂಡ ಬಾಯಿ ಬಿಟ್ಟಿಲ್ಲ. ರೇಣುಕಾಚಾರ್ಯ ಬಾಯಿಬಿಡುವ ಛಾನ್ಸೆ ಇಲ್ಲ. ಬೇಳೂರು ಗೋಪಾಲಕೃಷ್ಣ, ಸಿಟಿ ರವಿ, ಆನೇಕಲ್ ನಾರಾಯಣಸ್ವಾಮಿ, ಶಂಕರಲಿಂಗೇಗೌಡ, ಡಿ ಎಚ್ ಶಂಕರಮೂರ್ತಿ, ಕಮಲಾಗೌಡ ಇತರರು ಹೋರಾಟ ಆರಂಭವಾಗಲಿದೆ. ಯಾರು ಏನೇ ಮಾಡಿದರೂ ಶೋಭಾ ಕರಂದ್ಲಾಜೆ ಮಂತ್ರಿಯಾಗಿ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಒಟ್ಟಿನಲ್ಲಿ ಜೂನ್ ತಿಂಗಳಲ್ಲಿ ಸರಕಾರದಲ್ಲಿ ಬಿರುಗಾಳಿ ಏಳುವ ಸಾಧ್ಯತೆ ಇವೆ ಅಂತೀರಾ?
ಯಾತ್ರೆಯಲ್ಲಿರುವ ನಾನು ಬೆಂಗಳೂರಿಗೆ ಮರಳುವುದು ಜೂನ್ 4ಕ್ಕೆ ಎಂದು ಶೋಭಾ ಅವರೇ ಫೇಸ್ ಬುಕ್ ಮತ್ತು ಟ್ವಿಟ್ಟರ್ ಬರೆದುಕೊಂಡಿದ್ದಾರೆ. ಅಲ್ಲಿಯವರೆಗೆ ಸಸ್ಪೆನ್ಸ್ ಮುಂದುವರಿಯಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications