ವೈದ್ಯ ವೃಂದ ರೋಗಿಗಳನ್ನು ಬಂಧುಗಳಂತೆ ಕಾಣಲಿ

ಕಿದ್ವಾಯಿ ಸಂಸ್ಥೆ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಬ್ಲಾಕ್ನಲ್ಲಿ ಟೆಲಿಮೆಡಿಸನ್ ಘಟಕವನ್ನು ಉದ್ಫಾಟಿಸಿ ಮಾತನಾಡುತ್ತಿದ್ದ ಅವರು ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಹೆಚ್ಚಿಸುವ ಬದಲು ಸಾರ್ವಜನಿಕರು ತಮ್ಮ ದಿನನಿತ್ಯ ಜೀವನವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋದಲ್ಲಿ ಬಹಳಷ್ಟು ಖಾಯಿಲೆಗಳು ಬರುವುದನ್ನು ತಡೆಗಟ್ಟಬಹುದು ಎಂದು ತಿಳಿಸಿದರು.
ಶ್ರೀ ಕ್ಷೇತ್ರ ನಿರ್ಮಿಸಿರುವ ಈ ಐದು ವಾರ್ಡ್ಗಳಿಗೆ ಶ್ರೀ ಮಂಜುನಾಥೇಶ್ವರಸ್ವಾಮಿ, ಕಾರುಣ್ಯ, ವಾತ್ಸಲ್ಯ, ವೈಶಾಲ್ಯ ಹಾಗೂ ಸೌಖ್ಯ ಎಂದು ನಾಮಕರಣ ಮಾಡಲು ತಿಳಿಸಿರುವರೆಂದು ಸಚಿವರು ಈ ಸಂದರ್ಭದಲ್ಲಿ ನುಡಿದರು.
ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಪದ್ಮಭೂಷಣ ಡಾ. ಡಿ ವೀರೇಂದ್ರ ಹೆಗಡೆ ಅವರು ಮಾತನಾಡಿ, ನಮ್ಮ ತಂದೆಯವರು ಕ್ಯಾನ್ಸರ್ ಖಾಯಿಲೆಯಿಂದ ಮರಣ ಹೊಂದಿದರು. ಕ್ಯಾನ್ಸರ್ ರೋಗಿಯ ಮನೆಯವರು ಪಡುವ ಬವಣೆಯನ್ನು ಅರಿತ್ತಿದ್ದೇನೆ. ಹಿಂದೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವವರು ಭೂತಪ್ರೇತಗಳಿಂದ ಅಥವಾ ಯಾರೋ ಮಾಟ ಮಾಡಿಸಿರುವರೆಂಬ ಮೂಢ ನಂಬಿಕೆಯಿಂದ ಆಸ್ಪತ್ರೆಗೆ ಹೋಗದೇ ಮರಣ ಹೊಂದುತ್ತಿದ್ದರು. ಈಗ ಕಾಲ ಬದಲಾವಣೆಯಾಗಿದ್ದು ಶೇ.97ರಷ್ಟು ಜನ ಆಸ್ಪತ್ರೆಗೆ ಹೋಗಿ ಔಷಧೋಪಚಾರಗಳನ್ನು ಪಡೆದು ಕ್ಯಾನ್ಸರ್ ಖಾಯಿಲೆಯಿಂದ ಗುಣಮುಖರಾಗುತ್ತಿದ್ದಾರೆ ಎಂದು ಅವರು ತಿಳಿಸಿದರು.
ಪ್ರತಿಯೊಂದು ಕುಟುಂಬ ಆರೋಗ್ಯ ವಿಮೆ ಮಾಡಿಸುವ ಮುಖಾಂತರ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಕ್ಯಾನ್ಸರ್ ಚಿಕಿತ್ಸೆಗಾಗಿ ಬರುವ ರೋಗಿಗಳು ತಾಳ್ಮೆಯನ್ನು ಕಳೆದುಕೊಂಡು ವಿಕಾರವಾಗಿ ವರ್ತಿಸಿದರೂ ವೈದ್ಯ ಸಿಬ್ಬಂದಿ ತಾಳ್ಮೆ ಕಳೆದುಕೊಳ್ಳದೇ ಉತ್ತಮ ಸೇವೆಯನ್ನು ನೀಡಬೇಕೆಂದು ವೈದ್ಯ ಸಿಬ್ಬಂದಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮಕ್ಕೆ ಮೊದಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಬ್ಲಾಕ್ ಅನ್ನು ಲೋಕಾರ್ಪಣೆ ಮಾಡಿದರು. ಸಮಾರಂಭದಲ್ಲಿ ಶಾಸಕ ಡಾ ಹೇಮಚಂದ್ರಸಾಗರ್, ಕೊಳದ ಮಠದ ಶಾಂತವೀರ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಡಾ. ದೊಡ್ಡರಂಗೇಗೌಡ, ಕಿದ್ವಾಯಿ ಸಂಸ್ಥೆಯ ನಿರ್ದೇಶಕ ಡಾಂ ಎಂ. ವಿಜಯಕುಮಾರ್, ವೈದ್ಯಕೀಯ ಅಧ್ಯಕ್ಷ ಡಾ ಎಲ್. ಅಪ್ಪಾಜಿ ಅವರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications