ಕನ್ನಡ ತಂತ್ರಾಂಶ : ವರದಿ ಸಲ್ಲಿಸಿದ ಸಮಿತಿ

ಕೇವಲ ಒಂದೂವರೆ ವರ್ಷದ ಅವಧಿಯಲ್ಲೇ ವರದಿಯನ್ನು ಸಿದ್ದಪಡಿಸಿದ ಸಮಿತಿಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ, ನಿಮ್ಮದೇ ವರದಿ ಆಧಾರದ ಮೇಲೆ ಕನ್ನಡ ತಂತ್ರಾಂಶ ಅಭಿವೃದ್ಧಿ ಯೋಜನೆಯ ಅನುಷ್ಠಾನ ಜವಾಬ್ದಾರಿಯನ್ನೂ ನಿರ್ವಹಿಸುವಂತೆ ಸಮಿತಿಗೆ ಸೂಚಿಸಿದರು. ಆಡಳಿತದ ಎಲ್ಲ ಹಂತಗಳಲ್ಲಿ ಕನ್ನಡ ಭಾಷೆಯ ಬಳಕೆ ಆಗುವಂತೆ ಮಾಡುವುದು ವರದಿಯ ಮೂಲೊದ್ದೇಶವಾಗಿದೆ.
ಒಟ್ಟು 77 ಪುಟಗಳ ವರದಿಯನ್ನು ಸಲ್ಲಿಸಿದ ಸಮಿತಿ ಅಧ್ಯಕ್ಷ ಚಿದಾನಂದಗೌಡ ಅವರು, ಕನ್ನಡದ ಬೆಳವಣಿಗೆ ದೃಷ್ಟಿಯಿಂದ 10 ತಂತ್ರಾಂಶಗಳನ್ನು ಸಿದ್ಧಪಡಿಸಬೇಕಿದೆ ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ 10 ಸಲಹೆಗಳನ್ನೂ ಮುಂದಿಟ್ಟಿದ್ದಾರೆ.
ಸಮಿತಿ ನೀಡಿರುವ ಸಲಹೆಗಳು
* ಕನ್ನಡಕ್ಕೆ ಯೂನಿಕೋಡ್ ಶಿಷ್ಟತೆಯನ್ನು ಕಡ್ಡಾಯವೆಂದು ಪ್ರಕಟಿಸಬೇಕು ಹಾಗೂ ಕನ್ನಡದ ಎಲ್ಲ ಕೆಲಸಗಳು ಮತ್ತು ಅಂತರ್ಜಾಲ ತಾಣಗಳ ಯುನಿಕೋಡ್ ನಲ್ಲೇ ಇರಬೇಕೆಂದು ಸುತ್ತೋಲೆ ಹೊರಡಿಸಬೇಕು.
* ಎಲ್ಲ ಇಲಾಖೆಗಳಲ್ಲಿ ಪದ ಸಂಸ್ಕರಣೆಗೂ ಯುನಿಕೋಡ್ ಶಿಷ್ಟತೆ ಬಳಸಬೇಕು ಮತ್ತು ಮೂಲ ದಾಖಲೆಗಳನ್ನು ಯುನಿಕೋಡ್ ನಲ್ಲಿಯೇ ಸಿದ್ಧಪಡಿಸಬೇಕು.
* ಕನ್ನಡದ ಯೂನಿಕೋಡ್ ಅಕ್ಷರ ಶೈಲಿಗಳ ಲೋಪದೋಷ ನಿವಾರಣೆ ಹಾಗೂ ಸುಂದರ ಯೂನಿಕೋಡ್ ಅಕ್ಷರ ಶೈಲಿಗಳ ತಯಾರಿಕೆಗೆ ತಕ್ಷಣ ಕ್ರಮ.
* ಸರಕಾರದ ಎಲ್ಲ ಕೆಲಸಗಳಿಗೆ ಮುಕ್ತ ಮತ್ತು ಸ್ವತಂತ್ರ ತಂತ್ರಾಂಶ ಬಳಸಬೇಕು. ವಿಶೇಷ ಕೆಲಸಕ್ಕೆ ತಂತ್ರಾಂಶ ಅಲಭ್ಯವಿದ್ದಾಗ ಮಾತ್ರವೇ ವ್ಯಾಪಾರಿ ತಂತ್ರಾಂಶ ಬಳಸಲು ಸುತ್ತೋಲೆ ಹೊರಡಿಸಬೇಕು.
* ಮೊಬೈಲ್ ಫೋನ್ ತಯಾರಿಕೆಗೆ ಯೂನಿಕೋಡ್ ಶಿಷ್ಟತೆ ಆಳವಡಿಸಲು ನಿರ್ದೇಶನ ನೀಡಬೇಕು.
* ಕನ್ನಡ ತಂತ್ರಾಂಶವನ್ನು ಮತ್ತು ಮಾಹಿತಿ ತಂತ್ರಜ್ಞಾನ ಸಲಹಾ ಸಮಿತಿ ರಚನೆ ಮಾಡಬೇಕು.
* ಯೂನಿಕೋಡ್ ಒಕ್ಕೂಟಕ್ಕೆ ಕಾಲಕಾಲಕ್ಕೆ ಅಗತ್ಯ ಮಾಹಿತಿ ಒದಗಿಸುವ ಜವಾಬ್ದಾರಿಯನ್ನು ಈ ಸಮಿತಿಗೆ ನೀಡಬೇಕು.
* ತಮಿಳು ತಂತ್ರಾಂಶ ಅಭಿವೃದ್ಧಿ ನಿಧಿ ಮಾದರಿಯನ್ನು ಕನ್ನಡ ತಂತ್ರಾಂಶ ಅಭಿವೃದ್ಧಿ ನಿಧಿ ಸ್ಥಾಪಿಸಬೇಕು.
* ಓಪನ್ ಆಫೀಸ್ ಬಳಕೆ ಜನಪ್ರಿಯಗೊಳಿಸಲು ಸರಕಾರಿ ಸಿಬ್ಬಂದಿಗಳಿಗೆ ತರಬೇತಿ ಶಿಬಿರಗಳನ್ನು ನಡೆಸಬೇಕು.
* ಮಾಹಿತಿ ಸಿಂಧು ಯೋಜನೆಯ ಶೈಕ್ಷಣಿಕ ಮಾಹಿತಿಗಳು ಕನ್ನಡದಲ್ಲೇ ಇರಲು ಹಾಗೂ ಗಣಕ ಶಿಕ್ಷಣ ಕನ್ನಡದ ಮೂಲಕವೇ ಆಗಲು ಕ್ರಮಕೈಗೊಳ್ಳಬೇಕು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications