ಮುಗಿಲು ಮುಟ್ಟಿದ ನೋವಿನ ಆಕ್ರಂದನ

ಈ ಬಸ್ ದುರಂತದಲ್ಲಿ ಸತ್ತ 30 ಮಂದಿಯಲ್ಲಿ 24 ಮಂದಿ ಸುರಪುರದ ಕೂಲಿ ಕಾರ್ಮಿಕರು , ಈಗಾಗಲೇ 21 ಮಂದಿಯ ಶವವನ್ನು ಗುರುತಿಸಲಾಗಿದ್ದು, ಚಳ್ಳಕೆರೆಯ ಅಸ್ಪತ್ರೆಯಲ್ಲಿ ಶವಗಳನ್ನು ಇಡಲಾಗಿದೆ. ಡಿಎನ್ ಎ ತಂತ್ರಜ್ಞಾನ ಬಳಸಿ ಉಳಿದ ಶವಗಳ ಗುರುತು ಪತ್ತೆ ಕಾರ್ಯ ಮಾಡಲಾಗುತ್ತದೆ. ಸುರುಪುರದಿಂದ ಮೃತರ ಕುಟುಂಬದವರು ಚಳ್ಳಕೆರೆಗೆ ದಾವಿಸಿಬಂದಿದ್ದಾರೆ.
ಬದುಕುಳಿದವರು ಹೇಳಿದ ಕಥೆ ವ್ಯಥೆ: ಮುಂಜಾನೆ ವೇಳೆ ವಾಹನಗಳು ಕಮ್ಮಿಯಿದ್ದ ಕಾರಣ, ದುರಂತಕ್ಕೀಡಾದ ಬಸ್ ಸುಮಾರು 80 ಕಿ.ಮೀ ವೇಗದಲ್ಲಿ ಚಲಿಸುತ್ತಿತ್ತು, ಮುಂದೆ ಬರುತ್ತಿದ್ದ ಲಾರಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಗುದ್ದಿ ಪಲ್ಟಿ ಹೊಡೆದು ಪಕ್ಕದ ನಾಲ್ಕೈದು ಅಡಿ ಹಳ್ಳಕ್ಕೆ ಬಿತ್ತು ಎಂದು ಪ್ರತ್ಯಕ್ಷ ದರ್ಶಿಯೊಬ್ಬರು ಹೇಳುತ್ತಾರೆ.
ಬಸ್ ನ ಬಾಗಿಲು ನೆಲಮುಖವಾಗಿ ಬಿದ್ದಿತ್ತು. ಡೀಸೆಲ್ ಟ್ಯಾಂಕ್ ಗೆ ಬೆಂಕಿ ತಗುಲಿತು. ಆದರೆ, ಬಾಗಿಲು ತೆಗೆದು ಹೊರಬರಲಾಗದೆ 30 ಮಂದಿ ಸಜೀವ ದಹನವಾದರು. ಬಹುತೇಕ ಪ್ರಯಾಣಿಕರು ಮುಂಜಾನೆಯ ಸುಖನಿದ್ರೆಯಲ್ಲಿದ್ದರು.
ಬಸ್ ಗೆ ಬೆಂಕಿ ತಗುಲಿದ ತಕ್ಷಣ, ಎಚ್ಚರಗೊಂಡು ಕೈಲಿದ್ದ ಮಗುವನ್ನು ಗಟ್ಟಿಯಾಗಿ ಹಿಡಿದುಕೊಂಡೆ. ಕಿಟಕಿ ಗಾಜು ಹೊಡೆದು ಹೊರಬಿದ್ದೆ .ಆದರೆ, ನನ್ನ ಹೆಂಡತಿಯನ್ನು ಬದುಕಿಸಲಾಗಲಿಲ್ಲ. ಈಗ ನನ್ನ ಮಗುವಿಗೆ ಯಾರು ದಿಕ್ಕು ಎಂದು ಹೆಂಡತಿ ಶವವನ್ನು ಗುರುತಿಸಲು ಹೆಣಗಾಡುತ್ತಿದ್ದ ವ್ಯಕ್ತಿ ನೋವಿನಿಂದ ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications