Get Updates
Get notified of breaking news, exclusive insights, and must-see stories!

ಮುಗಿಲು ಮುಟ್ಟಿದ ನೋವಿನ ಆಕ್ರಂದನ

Challakere Bus Accident
ಚಳ್ಳಕೆರೆ, ಮೇ. 30: ಶತ್ರುವಿಗೂ ಇಂತಹ ಸಾವು ಬರೋದು ಬೇಡ ಎಂದು ಚಳ್ಳಕೆರೆಯ ಬಸ್ ದುರಂತದಲ್ಲಿ ಬದುಕುಳಿದವರು ನೋವಿನಿಂದ ಹೇಳುತ್ತಿದ್ದಾರೆ. ನಾಯಕನಹಟ್ಟಿ ದುರಂತ ಬಸ್ ಸುಟ್ಟು ಕರಕಲಾಗುವುದನ್ನು ಕಂಡವರು ಸತ್ತವರಿಗೆ ಸಂತಾಪ ರೂಪದಿ ಕಣ್ಣೀರು ಸುರಿಸುತ್ತಾ ಚಿತ್ರದುರ್ಗ ಹಾಗೂ ಚಳ್ಳಕೆರೆಯ ಆಸ್ಪತ್ರೆಯಲ್ಲಿ ಮಲಗಿದ್ದಾರೆ.

ಈ ಬಸ್ ದುರಂತದಲ್ಲಿ ಸತ್ತ 30 ಮಂದಿಯಲ್ಲಿ 24 ಮಂದಿ ಸುರಪುರದ ಕೂಲಿ ಕಾರ್ಮಿಕರು , ಈಗಾಗಲೇ 21 ಮಂದಿಯ ಶವವನ್ನು ಗುರುತಿಸಲಾಗಿದ್ದು, ಚಳ್ಳಕೆರೆಯ ಅಸ್ಪತ್ರೆಯಲ್ಲಿ ಶವಗಳನ್ನು ಇಡಲಾಗಿದೆ. ಡಿಎನ್ ಎ ತಂತ್ರಜ್ಞಾನ ಬಳಸಿ ಉಳಿದ ಶವಗಳ ಗುರುತು ಪತ್ತೆ ಕಾರ್ಯ ಮಾಡಲಾಗುತ್ತದೆ. ಸುರುಪುರದಿಂದ ಮೃತರ ಕುಟುಂಬದವರು ಚಳ್ಳಕೆರೆಗೆ ದಾವಿಸಿಬಂದಿದ್ದಾರೆ.

ಬದುಕುಳಿದವರು ಹೇಳಿದ ಕಥೆ ವ್ಯಥೆ: ಮುಂಜಾನೆ ವೇಳೆ ವಾಹನಗಳು ಕಮ್ಮಿಯಿದ್ದ ಕಾರಣ, ದುರಂತಕ್ಕೀಡಾದ ಬಸ್ ಸುಮಾರು 80 ಕಿ.ಮೀ ವೇಗದಲ್ಲಿ ಚಲಿಸುತ್ತಿತ್ತು, ಮುಂದೆ ಬರುತ್ತಿದ್ದ ಲಾರಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಗುದ್ದಿ ಪಲ್ಟಿ ಹೊಡೆದು ಪಕ್ಕದ ನಾಲ್ಕೈದು ಅಡಿ ಹಳ್ಳಕ್ಕೆ ಬಿತ್ತು ಎಂದು ಪ್ರತ್ಯಕ್ಷ ದರ್ಶಿಯೊಬ್ಬರು ಹೇಳುತ್ತಾರೆ.

ಬಸ್ ನ ಬಾಗಿಲು ನೆಲಮುಖವಾಗಿ ಬಿದ್ದಿತ್ತು. ಡೀಸೆಲ್ ಟ್ಯಾಂಕ್ ಗೆ ಬೆಂಕಿ ತಗುಲಿತು. ಆದರೆ, ಬಾಗಿಲು ತೆಗೆದು ಹೊರಬರಲಾಗದೆ 30 ಮಂದಿ ಸಜೀವ ದಹನವಾದರು. ಬಹುತೇಕ ಪ್ರಯಾಣಿಕರು ಮುಂಜಾನೆಯ ಸುಖನಿದ್ರೆಯಲ್ಲಿದ್ದರು.

ಬಸ್ ಗೆ ಬೆಂಕಿ ತಗುಲಿದ ತಕ್ಷಣ, ಎಚ್ಚರಗೊಂಡು ಕೈಲಿದ್ದ ಮಗುವನ್ನು ಗಟ್ಟಿಯಾಗಿ ಹಿಡಿದುಕೊಂಡೆ. ಕಿಟಕಿ ಗಾಜು ಹೊಡೆದು ಹೊರಬಿದ್ದೆ .ಆದರೆ, ನನ್ನ ಹೆಂಡತಿಯನ್ನು ಬದುಕಿಸಲಾಗಲಿಲ್ಲ. ಈಗ ನನ್ನ ಮಗುವಿಗೆ ಯಾರು ದಿಕ್ಕು ಎಂದು ಹೆಂಡತಿ ಶವವನ್ನು ಗುರುತಿಸಲು ಹೆಣಗಾಡುತ್ತಿದ್ದ ವ್ಯಕ್ತಿ ನೋವಿನಿಂದ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+