ಗುರೂಜಿಗೆ ಗುರಿ ಇಟ್ಟವರು ಯಾರು?

ಸಮಗ್ರ ತನಿಖೆ ಆರಂಭವಾಗಿದ್ದು ಆರೋಪಿಗಳ ಪತ್ತೆಗೆ ತಲಘಟ್ಟಪುರ ಪೊಲೀಸರು, ಐಜಿಪಿ ಕಮಲ್ ಪಂತ್ ತೀವ್ರ ತನಿಖೆ ಆರಂಭಿಸಿದ್ದರಾದರೂ ಇದುವರೆಗೆ ಯಾವುದೇ ಸುಳಿವು ಪತ್ತೆಯಾಗಿಲ್ಲ. ಮಲ್ಲಿಕಾರ್ಜುನ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದು, ಅತ ಗುಂಡೇಟು ತಿಂದ ಗುರೂಜಿ ಶಿಷ್ಯ ವಿನಯ್ ಅವರ ತಂದೆ ಎನ್ನಲಾಗಿದೆ. ವಿಚಾರಣೆ ಮುಂದುವರೆದಿದೆ.
ವಿಡಿಯೋ:ಇಂಥ ದಾಳಿಗಳಿಗೆ ಅಂಜುವವನು ನಾನಲ್ಲ:ಶ್ರೀಶ್ರೀ
ಭಾನುವಾರ ಸಂಜೆ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಸಂಜೆ 6 ಗಂಟೆಗೆ ಧ್ಯಾನ ಶಿಬಿರ ಮುಗಿಸಿ ಕಾರುಹತ್ತುತ್ತಿದ್ದ ರವಿಶಂಕರ್ ಅವರತ್ತ ಅಪರಿಚಿತ ವ್ಯಕ್ತಿಯೊಬ್ಬ ಗುಂಡು ಹಾರಿಸಿದ. ಆದರೆ, ಗುಂಡು ಶ್ರೀಗಳನ್ನು ತಾಕದೆ ಭಕ್ತನೊಬ್ಬನಿಗೆ ಬಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.
ಪ್ರತಿತಿಂಗಳ ಕೊನೆಯ ಭಾನುವಾರ ಗುರೂಜಿ ಆಶ್ರಮದಲ್ಲಿ ಸಂತ್ಸಂಗ ಕಾರ್ಯಕ್ರಮ ನಡೆಸುತ್ತಾರೆ. ಭಕ್ತಾದಿಗಳನ್ನು ಉದ್ದೇಶಿಸಿ ಪ್ರವಚನ ಮಾಡುವುದು ವಾಡಿಕೆ. ನಿನ್ನೆ ಭಾನುವಾರವು ಸಾವಿರಾರು ಭಕ್ತರು ಕಲೆತಿದ್ದರು. ಧ್ಯಾನ ಶಿಬಿರ ಮುಗಿದ ತಕ್ಷಣ ಗುರೂಜಿ ಕೊಲೆ ಪ್ರಯತ್ನ ನಡೆದಿದೆ.
ವಿಡಿಯೋ:ಗುಂಡು ಹಾರಿಸಿದವನನ್ನು ನಾನು ಕ್ಷಮಿಸಿದ್ದೇನೆ: ಶ್ರೀಶ್ರೀ
ರವಿಶಂಕರ್ ಅವರ ಪ್ರಾಣಕ್ಕೆ ಅಪಾಯ ಇರುವ ಬಗ್ಗೆ ಕೇಂದ್ರ ಗುಪ್ತ ದಳ ಮತ್ತಿತರ ಭದ್ರತಾ ಸಂಸ್ಥೆಗಳು ಅನೇಕ ಬಾರಿ ಮುನ್ನೆಚ್ಚರಿಕೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಅವರಿಗೆ ಝಡ್ ಪ್ಲಸ್ ಭದ್ರತೆಯನ್ನು ಒದಗಿಸಲಾಗಿದೆ. ಆದರೆ ಶರಪಂಜರದಲ್ಲಿರಲು ಇಷ್ಟಪಡದ ರವಿಶಂಕರ್ ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ಭಕ್ತರೊಂದಿಗೆ ಮುಕ್ತವಾಗಿ ಬೆರೆಯುತ್ತಿದ್ದರು.
ಆಶ್ರಮದಲ್ಲಿ ನೆಲೆಸಿರುವ ಪಾಸಿಟಿವ್ ಎನರ್ಜಿ ಯಿಂದಾಗಿ ಯಾವುದೇ ಅನಾಹುತ ಸಂಭಿಸಲಿಲ್ಲ. ಇದು ಶಾಂತಿ ಕುಟೀರ ಎಂದು ಘಟನೆಗೆ ಪ್ರತಿಕ್ರಿಯಿಸಿ ಮಾತನಾಡಿದ ಭಕ್ತ ರಾಮಶೇಶನ್ ದಟ್ಸ್ ಕನ್ನಡಕ್ಕೆ ತಿಳಿಸಿದರು. ಸುದರ್ಶನ ಕ್ರಿಯೆಯ ಬಲ ಎಂಥ ಆಪತ್ತನ್ನೂ ಹಿಮ್ಮೆಟ್ಟಿಸುತ್ತದೆ ಎಂಬ ಅಚಲ ನಿಲವು ಅವರಿಗಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications