ಜಾತಿ ಹೆಸರಲ್ಲಿ ಸರಕಾರಿ ಸೌಲಭ್ಯ ಲೂಟಿ

ಈ ಕುರಿತಂತೆ ಸೋಮವಾರ ತಹಶೀಲ್ದಾರ ಡಾ. ಪ್ರಶಾಂತ ನಾಲವಾರ ಅವರಿಗೆ ದೂರು ಸಲ್ಲಿಸಿರುವ ಎರಡೂ ಸಂಘಟನೆಯ ಪದಾಧಿಕಾರಿಗಳು, ಜಾತಿ ಪ್ರಮಾಣ ಪತ್ರದ ದಾಖಲೆಗಳನ್ನು ತಿದ್ದುಪಡಿ ಮಾಡಲಾಗಿರುವ ಬಗ್ಗೆ ಸೂಕ್ತ ಸಾಕ್ಷಾಧಾರಗಳನ್ನೂ ಸಲ್ಲಿಸಿದ್ದಾರೆ.
ಸವಣೂರ ಶಹರದಲ್ಲಿ 'ಭೋಯಿ' ಸಮಾಜದ ಕೆಲವು ವ್ಯಕ್ತಿಗಳು ಭೋವಿ ಎಂದು ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದಾರೆ. ತಂದೆಯ ಹೆಸರಿನಲ್ಲಿ ಭೋಯಿ ಎಂದು ದಾಖಲೆಗಳಿದ್ದರೂ, ಮಕ್ಕಳಿಗೆ ಭೋವಿ ಎಂದು ಜಾತಿ ಪ್ರಮಾಣ ಪತ್ರ ನೀಡಲಾಗಿದೆ. ತಾಲೂಕಿನಾಧ್ಯಂತ ಈ ರೀತಿಯಲ್ಲಿ ಬಹಳಷ್ಟು ಖೊಟ್ಟಿ ಜಾತಿ ಪ್ರಮಾಣ ಪತ್ರಗಳು ವಿತರಣೆಗೊಂಡಿರಬಹುದು. ಅವುಗಳನ್ನು ಪತ್ತೆ ಮಾಡಿ ಕಾನೂನಿನ ಅಡಿ ಕ್ರಮ ಜರುಗಿಸಬೇಕು ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ.
ಈ ಕುರಿತಂತೆ ಸರಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದ್ದರೂ, ಅದನ್ನು ನಿರ್ಲಕ್ಷಿಸಲಾಗುತ್ತಿದೆ. ಈ ರೀತಿಯ ನಕಲಿ ಜಾತಿ ಪ್ರಮಾಣ ಪತ್ರದಿಂದ ಭೋವಿ ಸಮಾಜದ ಜನರು ಸರಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ತಾಲೂಕಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ಮುಂದುವರೆದಲ್ಲಿ ಸಂಘಟನೆಯ ವತಿಯಿಂದ ಹೋರಾಟ ಮಾಡಲಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಹೇಮಣ್ಣ ಸಾಲಿ, ಶಿದ್ರಾಮಪ್ಪ ಇಟಗಿ, ಪರಸಪ್ಪ ಹತ್ತಿಮತ್ತೂರ, ನಿಂಗಪ್ಪ ಬಂಡಿವಡ್ಡರ, ಬಸವರಾಜ ವಡ್ಡರ, ಫಕ್ಕೀರಪ್ಪ ಬೂದಿಹಾಳ, ಚನ್ನಪ್ಪ ದೇವಸೂರ, ಉಮೇಶ ತಿಮ್ಮಾಪೂರ, ಬಸಪ್ಪ ಬಡಿಗೇರ, ನಾಗಪ್ಪ ತಿಮ್ಮಾಪೂರ, ನಾಗಪ್ಪ ನರೇಗಲ್ಲ, ದ್ಯಾಮಣ್ಣ ವಡ್ಡರ, ಆರ್.ಪಿ ಶಿಗ್ಗಾಂವಿ, ಹನುಮಂತಪ್ಪ ಸವಣೂರ, ತಿರುಪತಿ ಯಲವಿಗಿ, ದ್ಯಾಮಣ್ಣ ಕುಂದಗೋಳ, ಸೋಮಣ್ಣ ಬೇವಿನಹಳ್ಳಿ, ಲಕ್ಷ್ಮಣ ಕನವಳ್ಳಿ, ಬಸವರಾಜ ಮಲ್ಲಾಡದ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications