ಪರಿಹಾರ 'ದುರಂತ'ಗಳಿಗೆ ಕಾರಣರಾರು?

ಇದು ನಿಜಕ್ಕೂ ದುರಂತ, ಆದರೆ ಅಷ್ಟೇ ಸತ್ಯ. ಕಳೆದ ಮೇ 22ರಂದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಸತ್ತವರ ಕುಟುಂಬಕ್ಕೆ 72 ಲಕ್ಷ ರು. ಪರಿಹಾರ ನೀಡಲಾಗಿದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸತ್ತವರ ಕುಟುಂಬಕ್ಕೆ ಕೇವಲ 4 ಲಕ್ಷ ಪರಿಹಾರ ನೀಡಲಾಗಿದೆ. ವಿಮಾನ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ರೈಲು ಅಪಘಾತದಲ್ಲಿ ಸತ್ತವರಿಗಿಂತ 18 ಪಟ್ಟು ಹೆಚ್ಚು ಪರಿಹಾರ ನೀಡಲಾಗಿದೆ.
ಸಾವು ಒಂದೇ, ದುಃಖವೂ ಒಂದೇ, ರಾಷ್ಟ್ರವು ಒಂದೇ, ಆದರೆ ಪರಿಹಾರ ನೀಡುವಲ್ಲಿ ಮಾತ್ರ ಒಂದು ಕಣ್ಣಿಗೆ ಬೆಣ್ಣೆ ಮತ್ತು ಇನ್ನೊಂದು ಕಣ್ಣಿಗೆ ಸುಣ್ಣ ನೀತಿಯನ್ನು ಅನುಸರಿಸಲಾಗುತ್ತಿದೆ. ಎರಡು ಅಪಘಾತಗಳೂ ಭೀಕರವಾಗಿದ್ದವು. ಎರಡರಲ್ಲೂ ಅಪಾರ ಪ್ರಮಾಣದಲ್ಲಿ ಪ್ರಾಣ ಹಾನಿಯಾಗಿವೆ. ಆದರೂ ಪರಿಹಾರಗಳು ಬೇರೆಬೇರೆಯಾಗಿರುವುದಕ್ಕೆ ಕಾರಣಗಳೂ ಇಲ್ಲದಿಲ್ಲ.
ವಿಮಾನಯಾನ ಸಂಸ್ಥೆಗಳು ವಿಮಾ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿರುವುದರಿಂದ ಏರ್ ಕ್ಯಾರೇಜ್ ಕಾನೂನಿನ ಪ್ರಕಾರ ಸತ್ತವರಿಗೆ ಅಷ್ಟೊಂದು ಪರಿಹಾರ ನೀಡಲೇಬೇಕಾಗುತ್ತದೆ. ಆದರೆ, ರೈಲಿನಲ್ಲಿ ಪ್ರಯಾಣಿಸುವ ಜನ ಅಷ್ಟು ಅದೃಷ್ಟವಂತರಲ್ಲ. ರೈಲು ಅಪಘಾತದಲ್ಲಿ ಮಡಿದವರ ಕುಟುಂಬಕ್ಕೆ ಭಾರತೀಯ ರೈಲು ಕಾನೂನಿನ ಪ್ರಕಾರ ರೈಲು ಇಲಾಖೆಯೇ ಪರಿಹಾರ ನೀಡುತ್ತದೆ. ಹಿಂದೆ ವಿಮಾ ಕಂಪನಿಗಳೊಂದಿಗೆ ಮಾಡಿಕೊಂಡಿದ್ದ ಒಪ್ಪಂದವನ್ನು ಪುನರ್ ವಿಮರ್ಶಿಸಲು ಮತ್ತು ನವೀಕರಿಸಲು ಕೂಡ ರೈಲು ಇಲಾಖೆ ಯತ್ನಿಸಿಲ್ಲ. ಪರಿಹಾರ ದುರಂತಗಳಿಗೆ ಇದೇ ಮೂಲ ಕಾರಣ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications