ಮಳೆ ಅಬ್ಬರಕ್ಕೆ ಬಲಿಯಾದ ವಿದ್ಯಾರ್ಥಿನಿ

ಸಂಜನಾ ಸಿಂಗ್ ಎಂದಿನಂತೆ ಟ್ಯೂಷನ್ಗೆ ತೆರಳಿದ್ದ ಳು. ಸಂಜೆ 6.30ರ ಸುಮಾರಿಗೆ ಜೋರಾಗಿ ಮಳೆ ಸುರಿದ ಕಾರಣ, ಮಳೆಯಿಂದ ರಕ್ಷಿಸಿಕೊಳ್ಳಲು ಪಶುವೈದ್ಯ ಕಾಲೇಜ್ ಕಾಂಪೌಂಡ್ ಬಳಿ ನಿಂತಿದ್ದಳು. ಆಗ ಗೋಡೆ ಕುಸಿದ ಪರಿಣಾಮ ಮಣ್ಣಿನಡಿ ಸಂಜನಾ ಸಿಲುಕಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸತೊಡಗಿದಳು. ಗೋಡೆ ಕುಸಿದ ಮೇಲೆ ತನ್ನ ತಾಯಿಗೆ ಮೊಬೈಲ್ ಕರೆ ಮಾಡಲು ವಿಫಲ ಪ್ರಯತ್ನ ಸಂಜನಾ ನೀಡಿಸಿದ್ದರು ಎನ್ನಲಾಗಿದೆ.
ಇದನ್ನು ನೋಡಿದ ಸಾರ್ವಜನಿಕರು ಪೊಲೀಸ್ ನಿಯಂತ್ರಣ ಕೊಠಡಿಗೆ ವಿಷಯ ತಿಳಿಸಿದರು. ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮಣ್ಣನನ್ನು ತೆಗೆದರು. ಆದರೆ, ಆಕೆಯನ್ನು ಸಮೀಪದ ಬಾಪ್ಟಿಸ್ಟ್ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಳು.
ಹಲವೆಡೆ ಭರ್ಜರಿ ಮಳೆ: ನಗರದ ಬಹುತೇಕ ಬಡಾವಣೆಗಳಲ್ಲಿ ಮಂಗಳವಾರ ಸಂಜೆ ಗಾಳಿಯಿಂದ ಕೂಡಿದ ಭಾರಿ ಮಳೆಯಾಗಿದೆ. ಅನೇಕ ಕಡೆಗಳಲ್ಲಿ ಮರಗಳು ಉರುಳಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು. ಹೆಬ್ಬಾಳದಲ್ಲಿ ಮತ್ತೊಂದು ಗೋಡೆ ಕುಸಿದಿದೆ. ಶಿವಾಜಿನಗರ, ಜೆಪಿ ನಗರ, ಮಲ್ಲೇಶ್ವರ, ಜಯನಗರ, ಕನಕಪುರ ರಸ್ತೆ, ಎಂಜಿ ರಸ್ತೆ, ವಿಜಯನಗರ, ಗಿರಿನಗರ, ಹಲಸೂರು, ಮತ್ತಿಕೆರೆ ಮುಂತಾದೆಡೆ ಭರ್ಜರಿ ಮಳೆ ಬಿದ್ದಿದೆ.
ಲಿಂಗರಾಜಪುರ, ಮಾರುತಿ ಸೇವಾನಗರ, ಪಿಳ್ಳಣ್ಣಗಾರ್ಡನ್, ಕಾಕ್ಸ್ಟೌನ್, ಬಸವೇಶ್ವರ ನಗರ, ಆರ್.ಪಿ.ಸಿ.ಲೇಔಟ್, ಕೋರಮಂಗಲ, ಕಾಡುಗೋಡಿ, ವೈಟ್ ಫೀಲ್ಡ್, ಮಹದೇವಪುರ, ಯಶವಂತಪುರ ಮತ್ತಿತರ ಕಡೆ ಮರದ ಕೊಂಬೆಗಳು ಉರುಳಿ ಬಿದ್ದು,ಕೆಲ ಕಾರು, ದ್ವಿಚಕ್ರವಾಹನಗಳು ಜಖಂಗೊಂಡಿವೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications