ತಿರುಪತಿ ತಿಮ್ಮಪ್ಪನಿಗೆ ಅಡ್ಡಬಿದ್ದ ಚಿದಂಬರಂ

ಗುರುವಾರ ಮುಂಜಾನೆ ತಿರುಪತಿ ತಿಮ್ಮಪ್ಪನ ಆಲಯದ ಗರ್ಭಗುಡಿಯಲ್ಲಿ ನಡೆದ ವೆಂಕಟೇಶ್ವರ ಸುಪ್ರಭಾತ ಕಾರ್ಯಕ್ರಮದಲ್ಲಿ ಚಿದಂಬರಂ ಭಾಗವಹಿಸಿದ್ದರು. ಒಂದು ಗಂಟೆಗೂ ಹೆಚ್ಚು ಕಾಲ ಅವರು ದೇವಸ್ಥಾನದಲ್ಲಿ ಕಳೆದದ್ದು ವಿಶೇಷ ಎಂದು ತಿರುಮಲ ತಿರುಪತಿ ದೇವಸ್ಥಾನ ಮೂಲಗಳು ತಿಳಿಸಿವೆ.
ಸುಪ್ರಭಾತದ ಬಳಿಕ ಅವರು ಸಪ್ತಗಿರಿವಾಸನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.ಚಿದಂಬರಂ ಆಲಯದ ಶ್ರೀ ರಂಗ ಮಂಟಪದಲ್ಲಿ ಪುರೋಹಿತರ ಆಶೀರ್ವಚನ ಪಡೆದರು. ತಿರುಮಲ ತಿರುಪತಿ ಆಲಯದ ಅಧ್ಯಕ್ಷರು ಚಿದಂಬರಂ ಅವರಿಗೆ ರೇಷ್ಮೆ ವಸ್ತ್ರ, ಪ್ರಸಾದ ಮತ್ತು ಪವಿತ್ರ ಅಭಿಷೇಕದ ತೀರ್ಥವನ್ನು ಸಮರ್ಪಿಸಿದರು.
ಪೂಜಾ ಕಾರ್ಯ ಮುಗಿದ ಬಳಿಕ ತಿರುಪತಿ ವಿಮಾನ ನಿಲ್ದಾಣದಿಂದ ಚಿದಂಬರಂ ನವದೆಹಲಿಗೆ ಪ್ರಯಾಣ ಬೆಳೆಸಿದರು. ಕೇಂದ್ರ ಗೃಹ ಸಚಿವರಾದ ಬಳಿಕ ಚಿದಂಬರಂ ತಿರುಪತಿ ಆಲಯಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಕೇಂದ್ರ ಹಣಕಾಸು ಸಚಿವರಾಗಿದ್ದಾಗ 2004ರಲ್ಲಿ ಒಮ್ಮೆ ತಿರುಪತಿಗೆ ಭೇಟಿ ನೀಡಿದ್ದರು.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications