ಮುಂಗಾರಿಗೆ ಲೈಲಾ ನಂತರ ಫೇಟ್ ಕಾಟ

ಗುರುವಾರ ಹಾಗೂ ಶುಕ್ರವಾರ ಗುಜರಾತ್ ಕರಾವಳಿಗೆ ಅಪ್ಪಳಿಸಲಿರುವ ಫೇಟ್ ಚಂಡಮಾರುತದಿಂದ ಭಾರೀ ಮಳೆ ಸುರಿವ ನಿರೀಕ್ಷೆಯಲ್ಲಿ, ಗುಜರಾತ್ ನ ನಾಲ್ಕು ಜಿಲ್ಲೆಗಳಲ್ಲಿನ ಸುಮಾರು 8 ಸಾವಿರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಗುಜರಾತ್ ಕರಾವಳಿಯ ಮೇಲೆ ಪ್ರತಿ ಗಂಟೆಗೆ 25 ರಿಂದ 35 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಕಳೆದೆರಡು ದಿನಗಳಲ್ಲಿ ಸುಮಾರು 58 ಮಿಮೀ ಮಳೆಯನ್ನು ಗುಜರಾತ್ ರಾಜ್ಯ ಕಂಡಿದೆ.
ಗುಜರಾತ್ ನಿಂದ ಹೊರಟ ಫೇಟ್ , ಮಹಾರಾಷ್ಟ್ರ, ಕರ್ನಾಟಕ ಕರಾವಳಿ ಕಡೆಗೆ ತಿರುಗುವ ಸಾಧ್ಯತೆ ಕಮ್ಮಿ ಎನ್ನಲಾಗಿದ್ದು, ಓಮನ್ ದೇಶದ ಕಡೆಗೆ ಹೋಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ವ್ಯಕ್ತಪಡಿಸಿದೆ. ಆದರೂ, ರಾಜ್ಯದ ಕರಾವಳಿಯಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆ ಸಂಭವಿಸುವ ಸಾಧ್ಯತೆಯಿದೆ.
ಮುಂಗಾರು ಪ್ರವೇಶ: ಮೇ.31ರಂದು ಕೇರಳವನ್ನು ಮುಂಗಾರು ಪ್ರವೇಶಿಸಿದೆ. ಹವಾಮಾನ ಇಲಾಖೆ ಮೊದಲೇ ಇದನ್ನು ತಿಳಿಸಿದ್ದು ಅಂದು ದಕ್ಷಿಣ ಕೇರಳದಲ್ಲಿ ಭಾರೀ ಮಳೆ ಸುರಿದಿತ್ತು. ಜೂ.5ರಿಂದ ಕೇರಳ, ಕರ್ನಾಟಕ, ಮಹಾರಾಷ್ಟ್ರ ಕರಾವಳಿಯಲ್ಲಿ ಮಳೆಗಾಲ ಆರಂಭ.ನೈಋತ್ಯ ಮಾರುತದಿಂದ ಕೇರಳ ಮತ್ತು ಕರ್ನಾಟಕದಲ್ಲಿ ಈ ಮಳೆಗಾಲದಲ್ಲಿ ಉತ್ತಮ ಮಳೆ ಬರಲಿದೆ ಎಂದು ಕೃಷಿ ಕಾರ್ಯದರ್ಶಿ ಪಿ.ಕೆ.ಬಸು ಅವರೂ ಹೇಳಿದ್ದಾರೆ.
ಕಳೆದ ವರ್ಷ ಅನಾವೃಷ್ಟಿಯ ಕಾರಣ16 ದಶಲಕ್ಷ ಟನ್ ಆಹಾರಧಾನ್ಯ ನಷ್ಟ ಉಂಟಾಗಿತ್ತು. ಈ ವರ್ಷವಾಉತ್ತಮ ಮುಂಗಾರು ಮಳೆಯಿಂದ ರೈತರಿಗೆ ಹರ್ಷ ಉಂಟಾಗಲಿದೆ . ಆದರೆ, 'ಫೇಟ್' ಚಂಡಮಾರುತ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ಮುಂಗಾರು ಮೇಲೆ ಸ್ವಲ್ಪ ಪರಿಣಾಮ ಬೀರುವುದನ್ನು ಹವಾಮಾನ ತಜ್ಞರು ಒಪ್ಪಿಕೊಂಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications