ಮುಂಗಾರಿಗೆ ಲೈಲಾ ನಂತರ ಫೇಟ್ ಕಾಟ

ಗುರುವಾರ ಹಾಗೂ ಶುಕ್ರವಾರ ಗುಜರಾತ್ ಕರಾವಳಿಗೆ ಅಪ್ಪಳಿಸಲಿರುವ ಫೇಟ್ ಚಂಡಮಾರುತದಿಂದ ಭಾರೀ ಮಳೆ ಸುರಿವ ನಿರೀಕ್ಷೆಯಲ್ಲಿ, ಗುಜರಾತ್ ನ ನಾಲ್ಕು ಜಿಲ್ಲೆಗಳಲ್ಲಿನ ಸುಮಾರು 8 ಸಾವಿರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಗುಜರಾತ್ ಕರಾವಳಿಯ ಮೇಲೆ ಪ್ರತಿ ಗಂಟೆಗೆ 25 ರಿಂದ 35 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಕಳೆದೆರಡು ದಿನಗಳಲ್ಲಿ ಸುಮಾರು 58 ಮಿಮೀ ಮಳೆಯನ್ನು ಗುಜರಾತ್ ರಾಜ್ಯ ಕಂಡಿದೆ.
ಗುಜರಾತ್ ನಿಂದ ಹೊರಟ ಫೇಟ್ , ಮಹಾರಾಷ್ಟ್ರ, ಕರ್ನಾಟಕ ಕರಾವಳಿ ಕಡೆಗೆ ತಿರುಗುವ ಸಾಧ್ಯತೆ ಕಮ್ಮಿ ಎನ್ನಲಾಗಿದ್ದು, ಓಮನ್ ದೇಶದ ಕಡೆಗೆ ಹೋಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ವ್ಯಕ್ತಪಡಿಸಿದೆ. ಆದರೂ, ರಾಜ್ಯದ ಕರಾವಳಿಯಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆ ಸಂಭವಿಸುವ ಸಾಧ್ಯತೆಯಿದೆ.
ಮುಂಗಾರು ಪ್ರವೇಶ: ಮೇ.31ರಂದು ಕೇರಳವನ್ನು ಮುಂಗಾರು ಪ್ರವೇಶಿಸಿದೆ. ಹವಾಮಾನ ಇಲಾಖೆ ಮೊದಲೇ ಇದನ್ನು ತಿಳಿಸಿದ್ದು ಅಂದು ದಕ್ಷಿಣ ಕೇರಳದಲ್ಲಿ ಭಾರೀ ಮಳೆ ಸುರಿದಿತ್ತು. ಜೂ.5ರಿಂದ ಕೇರಳ, ಕರ್ನಾಟಕ, ಮಹಾರಾಷ್ಟ್ರ ಕರಾವಳಿಯಲ್ಲಿ ಮಳೆಗಾಲ ಆರಂಭ.ನೈಋತ್ಯ ಮಾರುತದಿಂದ ಕೇರಳ ಮತ್ತು ಕರ್ನಾಟಕದಲ್ಲಿ ಈ ಮಳೆಗಾಲದಲ್ಲಿ ಉತ್ತಮ ಮಳೆ ಬರಲಿದೆ ಎಂದು ಕೃಷಿ ಕಾರ್ಯದರ್ಶಿ ಪಿ.ಕೆ.ಬಸು ಅವರೂ ಹೇಳಿದ್ದಾರೆ.
ಕಳೆದ ವರ್ಷ ಅನಾವೃಷ್ಟಿಯ ಕಾರಣ16 ದಶಲಕ್ಷ ಟನ್ ಆಹಾರಧಾನ್ಯ ನಷ್ಟ ಉಂಟಾಗಿತ್ತು. ಈ ವರ್ಷವಾಉತ್ತಮ ಮುಂಗಾರು ಮಳೆಯಿಂದ ರೈತರಿಗೆ ಹರ್ಷ ಉಂಟಾಗಲಿದೆ . ಆದರೆ, 'ಫೇಟ್' ಚಂಡಮಾರುತ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ಮುಂಗಾರು ಮೇಲೆ ಸ್ವಲ್ಪ ಪರಿಣಾಮ ಬೀರುವುದನ್ನು ಹವಾಮಾನ ತಜ್ಞರು ಒಪ್ಪಿಕೊಂಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications