ಕೊಡಗು-ಕೇರಳ ಸಂಪರ್ಕ ರಸ್ತೆ ಸಂಚಾರ ಮುಕ್ತ

ಕಳೆದ ಒಂದೂವರೆ ವರ್ಷದಿಂದ ಕಾಮಗಾರಿ ನಡೆಯುತ್ತಿದ್ದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರನ್ನು ನಿಷೇಧಿಸಲಾಗಿತ್ತು. ಹೀಗಾಗಿ ಕೇರಳಕ್ಕೆ ತೆರಳುವ ಜನರಿಗೆ ತೊಂದರೆಯಾಗಿತ್ತು. ಕೊಡಗಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೇರಳಿಗರು ನೆಲೆಸಿದ್ದು, ವ್ಯಾಪಾರ ವಹಿವಾಟಿಗೆ ಈ ರಸ್ತೆ ರಾಜಮಾರ್ಗವಾಗಿತ್ತು. ರಸ್ತೆ ಮುಚ್ಚಿದ್ದರಿಂದ ಗಡಿಭಾಗದಲ್ಲಿ ನೆಲೆಸಿದವರ ಗೋಳು ಹೇಳತೀರದ್ದಾಗಿತ್ತು. ಅಲ್ಲದೆ ಕೇರಳಕ್ಕೆ ತೆರಳಬೇಕಾದವರು ಹತ್ತಿಪ್ಪತ್ತು ಕಿ.ಮೀ ದೂರದ ಊರನ್ನು ತಲುಪಲು ನೂರಾರು ಕಿ.ಮೀ. ಬಳಸಿ ಸಾಗಬೇಕಾಗಿತ್ತು.
ಕಳೆದ ಕೆಲವು ವರ್ಷಗಳಿಂದ ಈ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಚಲಿಸಲಾಗದ ಸ್ಥಿತಿ ನಿರ್ಮಾಣವಾಗಿತ್ತು. ರಸ್ತೆ ದುರಸ್ತಿಗಾಗಿ ಪ್ರತಿಭಟನೆಗಳೂ ನಡೆದಿದ್ದವು. ಕೊನೆಗೂ ಸರ್ಕಾರದ ಕಣ್ಣು ತೆರೆದಿದ್ದರಿಂದ ಸುಮಾರು 25 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಹತ್ತು ಹಲವು ವಿಘ್ನಗಳ ನಡುವೆ ಹೇಗೋ ಕಳೆದ ಒಂದೂವರೆ ವರ್ಷದಿಂದ ಕಾಮಗಾರಿ ನಡೆಯುತ್ತಾ ಬಂದಿದ್ದು ಇದೀಗ ಸಂಚಾರಕ್ಕೆ ಮುಕ್ತವಾಗುವ ಹಂತಕ್ಕೆ ತಲುಪಿದೆ.
ರಸ್ತೆಯ ಇಕ್ಕೆಲಗಳು ಮೀಸಲು ಅರಣ್ಯವನ್ನು ಹೊಂದಿರುವುದರಿಂದ ರಸ್ತೆಯನ್ನು ಅಗಲಗೊಳಿಸುವುದಾಗಲೀ, ಮರಕಡಿಯವುದಾಗಲೀ ಸಾಧ್ಯವಾಗದೆ ಕೆಲವು ನಿಬಂಧನೆಗಳಂತೆ ರಸ್ತೆಯನ್ನು ನಿರ್ಮಿಸಲಾಗಿದೆ. ಸುಮಾರು 14 ಕಿ.ಮೀ ಕಾಮಗಾರಿ ಮುಗಿದಿದ್ದು, ಇನ್ನು 2 ಕಿ.ಮೀ. ಮಳೆಗಾಲದ ಬಳಿಕ ನಡೆಯಲಿದೆ ಎನ್ನಲಾಗಿದೆ. ಸದ್ಯದಲ್ಲಿಯೇ ರಸ್ತೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದೆಂಬ ಸುದ್ದಿ ಸಂತಸ ತಂದಿದೆಯಲ್ಲದೆ, ಯಾವಾಗ ಪ್ರಾರಂಭವಾಗುತ್ತದೆಯೋ ಎನ್ನುವ ಕಾತರ ಈ ಭಾಗದ ಜನತೆಯದ್ದಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications