ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಸದ್ಯಕ್ಕಿಲ್ಲ

ಕೇಂದ್ರ ಗೃಹಸಚಿವ ಪ್ರಣಬ್ ಮುಖರ್ಜಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಲೆ ಏರಿಕೆಯ ಬಗ್ಗೆ ಯಾವುದೇ ಒಮ್ಮತ ನಿರ್ಣಯ ಕೈಗೊಳ್ಳಲು ಸಾಧ್ಯವಾಗಲಿಲ್ಲ ಆದರೆ, ಇಂಧನ ಬೆಲೆ ಏರಿಕೆ ಕೀರಟ್ ಪಾರೀಖ್ ಸಮಿತಿ ಶಿಫಾರಿಸ್ಸಿನ ಮೇಲೆ ಚರ್ಚೆ ನಡೆಸಲು ಮತ್ತೆ ಸಭೆ ಸೇರುವುದಾಗಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಆರ್ಥಿಕ ತಜ್ಞ ಕೀರಟ್ ಪಾರೀಖ್ ಅವರ ಸಮಿತಿ ಇಂಧನ ಬೆಲೆ ಏರಿಕೆ, ಸರ್ಕಾರಿ ಸ್ವಾಮ್ಯದ ಪೆಟ್ರೋಲ್ ಉದ್ಯಮಕ್ಕೆ ಆಗುತ್ತಿರುವ ನಷ್ಟದ ಬಗ್ಗೆ ಸಮಗ್ರ ವರದಿಯನ್ನು ಕಳೆದ ಫೆಬ್ರವರಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನೀಡಿದ್ದರು.
ಇಂಧನ ಕಂಪೆನಿಗಳಿಗೆ ನಷ್ಟ:ಬೆಲೆ ಪರಿಷ್ಕರಣೆ ಮಾಡದಿದ್ದಲ್ಲಿ ಈ ಹಣಕಾಸು ವರ್ಷದಲ್ಲಿ ತೈಲ ಕಂಪೆನಿಗಳು ಒಟ್ಟು 72,300 ಕೋಟಿ ರೂಪಾಯಿಗಳ ನಷ್ಟ ಅನುಭವಿಸಬೇಕಾಗುತ್ತದೆ ಎಂದು ವರದಿಯಲ್ಲಿ ಹೇಳಲಾಗಿತ್ತು. ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 3.50 ರು ಹೆಚ್ಚಳ ಹಾಗೂ ಅನಿಲದ ದರ ಪ್ರತಿ ಸಿಲಿಂಡರ್ ಗೆ 25 ರುಪಾಯಿಗಳಿಂದ 50 ರುಪಾಯಿಗಳವರೆಗೂ ಹೆಚ್ಚಿಸುವಂತೆ ಸೂಚಿಸಲಾಗಿತ್ತು.
ಸಬ್ಸಿಡಿ ದರದಲ್ಲಿ ಇಂಧನ ಮಾರಾಟ ಮಾಡುತ್ತಿರುವ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ ಹಾಗೂ ಭಾರತ್ ಪೆಟ್ರೋಲಿಯಂಗಳಿಗೆ ಪ್ರತಿದಿನ 203 ಕೋಟಿ ರು ನಷ್ಟು ನಷ್ಟವಾಗುತ್ತಿದೆ.
ಪ್ರಣಬ್ ಮುಖರ್ಜಿ ನೇತೃತ್ವದಲ್ಲಿ ನಡೆದ ಸಚಿವರ ಸಮೂಹ ಸಭೆಯಲ್ಲಿ ಇಂಧನ ಸಚಿವ ಮುರಳಿ ದಿಯೋರಾ, ಕೃಷಿ ಸಚಿವ ಶರದ್ ಪವಾರ್ , ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಎಂಕೆ ಅಳಗಿರಿ, ರೈಲ್ವೇ ಸಚಿವೆ ಮಮತಾ ಬ್ಯಾನರ್ಜಿ, ರಸ್ತೆ ಸಾರಿಗೆ ಸಚಿವ ಕಮಲ್ ನಾಥ್ ಹಾಗೂ ಯೋಜನಾ ಆಯೋಗದ ಉಪಾಧ್ಯಕ್ಷ ಮಾಂಟೆಕ್ ಸಿಂಗ್ ಅಹ್ಲುವಾಲಿಯಾ ಭಾಗವಹಿಸಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications