ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಸದ್ಯಕ್ಕಿಲ್ಲ

ಕೇಂದ್ರ ಗೃಹಸಚಿವ ಪ್ರಣಬ್ ಮುಖರ್ಜಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಲೆ ಏರಿಕೆಯ ಬಗ್ಗೆ ಯಾವುದೇ ಒಮ್ಮತ ನಿರ್ಣಯ ಕೈಗೊಳ್ಳಲು ಸಾಧ್ಯವಾಗಲಿಲ್ಲ ಆದರೆ, ಇಂಧನ ಬೆಲೆ ಏರಿಕೆ ಕೀರಟ್ ಪಾರೀಖ್ ಸಮಿತಿ ಶಿಫಾರಿಸ್ಸಿನ ಮೇಲೆ ಚರ್ಚೆ ನಡೆಸಲು ಮತ್ತೆ ಸಭೆ ಸೇರುವುದಾಗಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಆರ್ಥಿಕ ತಜ್ಞ ಕೀರಟ್ ಪಾರೀಖ್ ಅವರ ಸಮಿತಿ ಇಂಧನ ಬೆಲೆ ಏರಿಕೆ, ಸರ್ಕಾರಿ ಸ್ವಾಮ್ಯದ ಪೆಟ್ರೋಲ್ ಉದ್ಯಮಕ್ಕೆ ಆಗುತ್ತಿರುವ ನಷ್ಟದ ಬಗ್ಗೆ ಸಮಗ್ರ ವರದಿಯನ್ನು ಕಳೆದ ಫೆಬ್ರವರಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನೀಡಿದ್ದರು.
ಇಂಧನ ಕಂಪೆನಿಗಳಿಗೆ ನಷ್ಟ:ಬೆಲೆ ಪರಿಷ್ಕರಣೆ ಮಾಡದಿದ್ದಲ್ಲಿ ಈ ಹಣಕಾಸು ವರ್ಷದಲ್ಲಿ ತೈಲ ಕಂಪೆನಿಗಳು ಒಟ್ಟು 72,300 ಕೋಟಿ ರೂಪಾಯಿಗಳ ನಷ್ಟ ಅನುಭವಿಸಬೇಕಾಗುತ್ತದೆ ಎಂದು ವರದಿಯಲ್ಲಿ ಹೇಳಲಾಗಿತ್ತು. ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 3.50 ರು ಹೆಚ್ಚಳ ಹಾಗೂ ಅನಿಲದ ದರ ಪ್ರತಿ ಸಿಲಿಂಡರ್ ಗೆ 25 ರುಪಾಯಿಗಳಿಂದ 50 ರುಪಾಯಿಗಳವರೆಗೂ ಹೆಚ್ಚಿಸುವಂತೆ ಸೂಚಿಸಲಾಗಿತ್ತು.
ಸಬ್ಸಿಡಿ ದರದಲ್ಲಿ ಇಂಧನ ಮಾರಾಟ ಮಾಡುತ್ತಿರುವ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ ಹಾಗೂ ಭಾರತ್ ಪೆಟ್ರೋಲಿಯಂಗಳಿಗೆ ಪ್ರತಿದಿನ 203 ಕೋಟಿ ರು ನಷ್ಟು ನಷ್ಟವಾಗುತ್ತಿದೆ.
ಪ್ರಣಬ್ ಮುಖರ್ಜಿ ನೇತೃತ್ವದಲ್ಲಿ ನಡೆದ ಸಚಿವರ ಸಮೂಹ ಸಭೆಯಲ್ಲಿ ಇಂಧನ ಸಚಿವ ಮುರಳಿ ದಿಯೋರಾ, ಕೃಷಿ ಸಚಿವ ಶರದ್ ಪವಾರ್ , ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಎಂಕೆ ಅಳಗಿರಿ, ರೈಲ್ವೇ ಸಚಿವೆ ಮಮತಾ ಬ್ಯಾನರ್ಜಿ, ರಸ್ತೆ ಸಾರಿಗೆ ಸಚಿವ ಕಮಲ್ ನಾಥ್ ಹಾಗೂ ಯೋಜನಾ ಆಯೋಗದ ಉಪಾಧ್ಯಕ್ಷ ಮಾಂಟೆಕ್ ಸಿಂಗ್ ಅಹ್ಲುವಾಲಿಯಾ ಭಾಗವಹಿಸಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications