ಗಂಡನೂ ಬೇಡವಾದ, ಪ್ರಿಯತಮನೂ ಕೈಕೊಟ್ಟ

ವೈಟ್ ಫೀಲ್ಡ್ ಐಟಿ ಪಾರ್ಕ್ ನಲ್ಲಿರುವ ಖ್ಯಾತ ಐಟಿ ಕಂಪನಿಯಲ್ಲಿ ಸಾಫ್ಟ್ ವೇರ್ ಕೆಲಸದಲ್ಲಿದ್ದ 32 ವರ್ಷದ ಕೀರ್ತಿ ಮದುವೆಯಾಗಿದ್ದರೂ ಸಹೋದ್ಯೋಗಿ ರಂಗರಾಜನ್ ಎಂಬ ಧೂರ್ತನ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು. ತನ್ನ ಗಂಡನಿಗೆ ವಿಚ್ಛೇದನ ನೀಡಿದರೆ ಮದುವೆಯಾಗುವುದಾಗಿ ರಂಗರಾಜನ್ ಆಕೆಗೆ ಭಾಷೆಯಿತ್ತಿದ್ದ.
ಬೆಕ್ಕು ಕಣ್ಣು ಮುಚ್ಚಿಕೊಂಡಿಕೊಂಡು ಹಾಲು ಕುಡಿಯುತ್ತಿದ್ದರೂ ಗೊತ್ತಾಗದ ಕೀರ್ತಿ ರಂಗರಾಜನ್ ಬೀಸಿದ ಬಲೆಯಲ್ಲಿ ಬಿದ್ದಿದ್ದಾಳೆ. ವಿಚ್ಛೇದನ ಅರ್ಜಿ ಸಲ್ಲಿಸಿದ ಕೀರ್ತಿ ಬಸವನಗುಡಿಯಲ್ಲಿದ್ದ ರಂಗರಾಜನ್ ಜೊತೆ ಲೀವ್-ಇನ್-ಸಂಬಂಧ ಶುರುಮಾಡಿದ್ದಾಳೆ. ಕೆಲ ತಿಂಗಳ 'ಸುಖ ಸಂಸಾರ' ನಡೆಸಿದ ಕೀರ್ತಿಗೆ ರಂಗರಾಜನ್ ತನ್ನನ್ನು ಬಳಸಿಕೊಳ್ಳುತ್ತಿದ್ದಾನೆ ಮತ್ತು ತನ್ನನ್ನು ಮದುವೆಯಾಗುವ ಯಾವ ಉದ್ದೇಶವೂ ಆತನಿಗಿಲ್ಲ ಎಂಬುದು ಮನವರಿಕೆಯಾಗಿದೆ.
ಅಷ್ಟರಲ್ಲಾಗಲೇ ಕಾಲ ಮಿಂಚಿತ್ತು. ಇವಳನ್ನು ಮದುವೆಯಾಗುವುದಾಗಿ ನಂಬಿಸಿದ್ದ ರಂಗರಾಜನ್ ಮತ್ತೊಬ್ಬಳನ್ನು ತನ್ನ ಬಾಳ ಸಂಗಾತಿಯನ್ನಾಗಿ ಮಾಡಿಕೊಳ್ಳಲು ತೆರೆಮರೆಯ ಸಿದ್ಧತೆ ನಡೆಸಿದ್ದ. ಮಿಂಚಿ ಹೋದ ಮಾತಿಗೆ ಚಿಂತಿಸಲು ಪ್ರಾರಂಭಿಸಿದ ಕೀರ್ತಿ ಮತ್ತು ರಂಗರಾಜನ್ ನಡುವೆ ವಾಗ್ಯುದ್ಧ ನಡೆದಿದೆ. ಇದನ್ನು ಬಹಿರಂಗಪಡಿಸಿದರೆ ಕೊಲ್ಲುವುದಾಗಿ ರಂಗರಾಜನ್ ಗೂಂಡಾಗಳನ್ನು ಬಳಸಿ ಕೀರ್ತಿಯನ್ನು ಬೆದರಿಸಿದ್ದಾನೆ. ಆಕೆ ಬಗ್ಗದಿದ್ದಾಗ ಬೆಂಕಿ ಹಚ್ಚಿ ಸುಡಲು ಯತ್ನಿಸಿದ್ದಾನೆ. ಹೇಗೋ ಪಾರಾದ ಕೀರ್ತಿ ಪೊಲೀಸರಿಗೆ ಆತನ ವಿರುದ್ಧ ದೂರು ನೀಡಿದ್ದಾಳೆ.
ಎಚ್ಎಸ್ಆರ್ ಲೇಔಟ್ ಪೊಲೀಸರು ದೂರು ದಾಖಲಿಸಿಕೊಂಡು ರಂಗರಾಜನ್ ನನ್ನು ಕರೆದು ಬುದ್ಧಿ ಹೇಳಿ ಆತನ ಮನವೊಲಿಸಲು ಯತ್ನಿಸಿದ್ದಾರೆ. ತನ್ನನ್ನು ತಾನು ತಿದ್ದಿಕೊಂಡು ಕೀರ್ತಿಯನ್ನು ಮದುವೆಯಾಗಲು ಒತ್ತಾಯಿಸಿದ್ದಾರೆ. ಆತ ದಾರಿಗೆ ಬರದಿದ್ದರೆ ಕ್ರಮ ತೆಗೆದುಕೊಳ್ಳುವುದಾಗಿ ಕೀರ್ತಿಗೆ ವಾಗ್ದಾನ ನೀಡಿದ್ದಾರೆ.
ಈ ಘಟನೆ ಕುರಿತಂತೆ ಕೆಲ ಪ್ರಶ್ನೆಗಳು :
* ಕೀರ್ತಿ ವಿಚ್ಛೇದನ ಅರ್ಜಿ ಹಿಂದೆ ಪಡೆದು ಹಳೆ ಗಂಡನ ಪಾದವನ್ನು ಹಿಡಿದುಕೊಳ್ಳಬೇಕೆ?
* ವಂಚಿಸಿದ ಪ್ರಿಯಕರನನ್ನು ಪ್ರಿಯತಮೆ ಮದುವೆಯಾಗಬೇಕೆ?
* ಇಬ್ಬರನ್ನೂ ಬಿಟ್ಟು ಕೀರ್ತಿ ಹೊಸ ಜೀವನ ನಡೆಸಬೇಕೆ?
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications