ಗಂಡನೂ ಬೇಡವಾದ, ಪ್ರಿಯತಮನೂ ಕೈಕೊಟ್ಟ

ವೈಟ್ ಫೀಲ್ಡ್ ಐಟಿ ಪಾರ್ಕ್ ನಲ್ಲಿರುವ ಖ್ಯಾತ ಐಟಿ ಕಂಪನಿಯಲ್ಲಿ ಸಾಫ್ಟ್ ವೇರ್ ಕೆಲಸದಲ್ಲಿದ್ದ 32 ವರ್ಷದ ಕೀರ್ತಿ ಮದುವೆಯಾಗಿದ್ದರೂ ಸಹೋದ್ಯೋಗಿ ರಂಗರಾಜನ್ ಎಂಬ ಧೂರ್ತನ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು. ತನ್ನ ಗಂಡನಿಗೆ ವಿಚ್ಛೇದನ ನೀಡಿದರೆ ಮದುವೆಯಾಗುವುದಾಗಿ ರಂಗರಾಜನ್ ಆಕೆಗೆ ಭಾಷೆಯಿತ್ತಿದ್ದ.
ಬೆಕ್ಕು ಕಣ್ಣು ಮುಚ್ಚಿಕೊಂಡಿಕೊಂಡು ಹಾಲು ಕುಡಿಯುತ್ತಿದ್ದರೂ ಗೊತ್ತಾಗದ ಕೀರ್ತಿ ರಂಗರಾಜನ್ ಬೀಸಿದ ಬಲೆಯಲ್ಲಿ ಬಿದ್ದಿದ್ದಾಳೆ. ವಿಚ್ಛೇದನ ಅರ್ಜಿ ಸಲ್ಲಿಸಿದ ಕೀರ್ತಿ ಬಸವನಗುಡಿಯಲ್ಲಿದ್ದ ರಂಗರಾಜನ್ ಜೊತೆ ಲೀವ್-ಇನ್-ಸಂಬಂಧ ಶುರುಮಾಡಿದ್ದಾಳೆ. ಕೆಲ ತಿಂಗಳ 'ಸುಖ ಸಂಸಾರ' ನಡೆಸಿದ ಕೀರ್ತಿಗೆ ರಂಗರಾಜನ್ ತನ್ನನ್ನು ಬಳಸಿಕೊಳ್ಳುತ್ತಿದ್ದಾನೆ ಮತ್ತು ತನ್ನನ್ನು ಮದುವೆಯಾಗುವ ಯಾವ ಉದ್ದೇಶವೂ ಆತನಿಗಿಲ್ಲ ಎಂಬುದು ಮನವರಿಕೆಯಾಗಿದೆ.
ಅಷ್ಟರಲ್ಲಾಗಲೇ ಕಾಲ ಮಿಂಚಿತ್ತು. ಇವಳನ್ನು ಮದುವೆಯಾಗುವುದಾಗಿ ನಂಬಿಸಿದ್ದ ರಂಗರಾಜನ್ ಮತ್ತೊಬ್ಬಳನ್ನು ತನ್ನ ಬಾಳ ಸಂಗಾತಿಯನ್ನಾಗಿ ಮಾಡಿಕೊಳ್ಳಲು ತೆರೆಮರೆಯ ಸಿದ್ಧತೆ ನಡೆಸಿದ್ದ. ಮಿಂಚಿ ಹೋದ ಮಾತಿಗೆ ಚಿಂತಿಸಲು ಪ್ರಾರಂಭಿಸಿದ ಕೀರ್ತಿ ಮತ್ತು ರಂಗರಾಜನ್ ನಡುವೆ ವಾಗ್ಯುದ್ಧ ನಡೆದಿದೆ. ಇದನ್ನು ಬಹಿರಂಗಪಡಿಸಿದರೆ ಕೊಲ್ಲುವುದಾಗಿ ರಂಗರಾಜನ್ ಗೂಂಡಾಗಳನ್ನು ಬಳಸಿ ಕೀರ್ತಿಯನ್ನು ಬೆದರಿಸಿದ್ದಾನೆ. ಆಕೆ ಬಗ್ಗದಿದ್ದಾಗ ಬೆಂಕಿ ಹಚ್ಚಿ ಸುಡಲು ಯತ್ನಿಸಿದ್ದಾನೆ. ಹೇಗೋ ಪಾರಾದ ಕೀರ್ತಿ ಪೊಲೀಸರಿಗೆ ಆತನ ವಿರುದ್ಧ ದೂರು ನೀಡಿದ್ದಾಳೆ.
ಎಚ್ಎಸ್ಆರ್ ಲೇಔಟ್ ಪೊಲೀಸರು ದೂರು ದಾಖಲಿಸಿಕೊಂಡು ರಂಗರಾಜನ್ ನನ್ನು ಕರೆದು ಬುದ್ಧಿ ಹೇಳಿ ಆತನ ಮನವೊಲಿಸಲು ಯತ್ನಿಸಿದ್ದಾರೆ. ತನ್ನನ್ನು ತಾನು ತಿದ್ದಿಕೊಂಡು ಕೀರ್ತಿಯನ್ನು ಮದುವೆಯಾಗಲು ಒತ್ತಾಯಿಸಿದ್ದಾರೆ. ಆತ ದಾರಿಗೆ ಬರದಿದ್ದರೆ ಕ್ರಮ ತೆಗೆದುಕೊಳ್ಳುವುದಾಗಿ ಕೀರ್ತಿಗೆ ವಾಗ್ದಾನ ನೀಡಿದ್ದಾರೆ.
ಈ ಘಟನೆ ಕುರಿತಂತೆ ಕೆಲ ಪ್ರಶ್ನೆಗಳು :
* ಕೀರ್ತಿ ವಿಚ್ಛೇದನ ಅರ್ಜಿ ಹಿಂದೆ ಪಡೆದು ಹಳೆ ಗಂಡನ ಪಾದವನ್ನು ಹಿಡಿದುಕೊಳ್ಳಬೇಕೆ?
* ವಂಚಿಸಿದ ಪ್ರಿಯಕರನನ್ನು ಪ್ರಿಯತಮೆ ಮದುವೆಯಾಗಬೇಕೆ?
* ಇಬ್ಬರನ್ನೂ ಬಿಟ್ಟು ಕೀರ್ತಿ ಹೊಸ ಜೀವನ ನಡೆಸಬೇಕೆ?
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications