ಶ್ರೀರಂಗಪಟ್ಟಣ ರಾಜಗೋಪುರದಲ್ಲಿ ಬಿರುಕು
ಶ್ರೀರಂಗಪಟ್ಟಣ, ಜೂ.8:ಆಂಧ್ರಪ್ರದೇಶದ ಚಿತ್ತೂರಿನ ಕಾಳಹಸ್ತಿ ದೇವಸ್ಥಾನದ 135 ಅಡಿ ಎತ್ತರದ ರಾಜಗೋಪುರ ಕುಸಿದು ಬಿದ್ದ ಘಟನೆ ಇನ್ನೂ ಕಣ್ಣ ಮುಂದಿರುವಾಗಲೇ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿಯ 65 ಅಡಿ ಎತ್ತರದ ರಾಜಗೋಪುರ ಬಿರುಕು ಬಿಟ್ಟಿರುವುದು[ಚಿತ್ರ ವೀಕ್ಷಿಸಿ] ಆತಂಕ ಸೃಷ್ಟಿಸಿದೆ.
ಗಂಗ ಅರಸರ ಪ್ರಧಾನ ಮಂತ್ರಿಯಾಗಿದ್ದ ತಿರುಮಲರಾಯ ಎಂಬಾತ ಕ್ರಿ.ಶ.894ರ ಅವಧಿಯಲ್ಲಿ ಶ್ರೀರಂಗಸ್ವಾಮಿ ದೇವಾಲಯವನ್ನು ಕಟ್ಟಿಸಿದ್ದು, ಬಳಿಕ ರಾಜಗೋಪುರವನ್ನು 1117ರಲ್ಲಿ ನಿರ್ಮಿಸಲಾಯಿತು ಎನ್ನಲಾಗಿದೆ. ಆ ನಂತರ ಆಡಳಿತ ನಡೆಸಿದ ರಾಜಮಹಾರಾಜರು ಈ ದೇವಾಲಯವನ್ನು ಅಭಿವೃದ್ಧಿಪಡಿಸಿದರು ಎಂದು ಇತಿಹಾಸದಿಂದ ತಿಳಿದು ಬರುತ್ತದೆ.
ಕಳೆದಎರಡು ಮೂರು ವರ್ಷಗಳ ಹಿಂದೆ ಈ ಗೋಪುರಕ್ಕೆ ಸಿಡಿಲು ಬಡಿದಿದ್ದು ಅದರಿಂದಾಗಿ ಇದೀಗ 5 ಅಂತಸ್ತುಗಳ 65 ಅಡಿ ಎತ್ತರದ ರಾಜಗೋಪುರದ 10 ರಿಂದ 15ನೇ ಅಡಿ ಮೇಲೆ ಬಿರುಕು ಕಾಣಿಸಿದೆ. ಅಲ್ಲದೆ ದಿನದಿಂದ ದಿನಕ್ಕೆ ಈ ಬಿರುಕುಗಳು ವಿಸ್ತರಿಸುತ್ತಿದೆ.
ಗೋಪುರದ ನಿರ್ಮಾಣಕ್ಕೆ ಬಳಸಿದ ಕಾಂಕ್ರಿಟ್ ಸಣ್ಣ ಸಣ್ಣ ಚೂರುಗಳಾಗಿ ನೆಲಕ್ಕೆ ಉದುರುತ್ತಿವೆ. ಇದು ಜನತೆಯಲ್ಲಿ ಭಯ ಹುಟ್ಟಿಸಿದೆ. ಈ ಬಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಗಮನಕ್ಕೆ ತರಲಾಗಿದ್ದು ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ ಎನ್ನಲಾಗಿದೆ. ಸಂಬಂಧಿಸಿದವರು ದುರಂತ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾದ ಅಗತ್ಯವಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications