ದೇಶಪಾಂಡೆ ಕೇಸ್ ಈಗ ಮೇಡಂ ಕೈಲಿದೆ

RV Deshpande
ನವದೆಹಲಿ, ಜೂ.11: ನೆರೆ ಪರಿಹಾರ ನಿಧಿ ದುರ್ಬಳಕೆ ಮಾಡಿದ ಆರೋಪ ಹೊತ್ತಿರುವ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆಗೆ ಕೊನೆಗೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ದರ್ಶನ ಭಾಗ್ಯ ಸಿಕ್ಕಿದೆ. ಕಳೆದ ಎರಡು ಮೂರು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ದೇಶಪಾಂಡೆ, ಕಾಂಗ್ರೆಸ್ ಅಧಿನಾಯಕಿಯ ಜೊತೆ ಇಂದು ಸುಮಾರು 45 ನಿಮಿಷಗಳ ಕಾಲ ಮಾತನಾಡಿ, ಪ್ರಕರಣದ ಬಗ್ಗೆ ವಿವರಣೆ ನೀಡಿದ್ದಾರೆ.

ಸೋನಿಯಾ ಅವರ ಅಧಿಕೃತ ನಿವಾಸದಲ್ಲಿ ಇಂದು ಮಧ್ಯಾಹ್ನ ಭೇಟಿ ಮಾಡಿ ವಿಸ್ತೃತ ವರದಿ ಸಲ್ಲಿಸಿದ್ದಾರೆ. ಆದರೆ, ಇದು ತಮ್ಮ ವಿರುದ್ಧ ಡಿಕೆ ಶಿವಕುಮಾರ್ ಹೂಡಿರುವ ಪಿತೂರಿ ಎಂದು ಸೋನಿಯಾಜಿಗೆ ಹೇಳಿದ್ದಾರೆಯೇ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ.

ಆರೋಪ ಸಾಬೀತಾದರೆ ಗಲ್ಲಿಗೇರಿಸಿ ಎಂದಿದ್ದ ದೇಶಪಾಂಡೆ, ಇಂದು ಸೋನಿಯಾ ಭೇಟಿ ನಂತರ ಮಾತನಾಡಿ, ಹೈಕಮಾಂಡ್ ಬಯಸಿದರೆ ನಾನು ರಾಜೀನಾಮೆಗೂ ಸಿದ್ಧನಿದ್ದೇನೆ. ಅದಕ್ಕೆ ನಾನು ಹೆದರುವುದಿಲ್ಲ. ಪಕ್ಷಕ್ಕಿಂತ ವ್ಯಕ್ತಿ ದೊಡ್ಡವನಲ್ಲ ಎಂದು ದೇಶಪಾಂಡೆ ಹೇಳಿದರು.

ದೆಹಲಿಯಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕರಾದ ಅಹ್ಮದ್ ಪಟೇಲ್, ಮೋತಿಲಾಲ್ ವೋರಾ , ಗುಲಾಂ ನಬಿ ಅಜಾದ್ ಅವರನ್ನು ಭೇಟಿ ಮಾಡಿದ ನಂತರ ಸೋನಿಯಾ ಗಾಂಧಿ ಭೇಟಿಗಾಗಿ ಎರಡು ದಿನದಿಂದ ದೇಶಪಾಂಡೆ ಕಾದು ಕೂತಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+