ಮದ್ರಸಾ, ಮಸೀದಿಗಳಲ್ಲಿ ಮೊಳಗಲಿದೆ ಕನ್ನಡ ಕಹಳೆ

Kannada camps in madrasas, mosques
ಬೆಂಗಳೂರು, ಜೂ.12: ಮುಸ್ಲಿಂ ಬಾಂಧವರಲ್ಲಿ ಕನ್ನಡ ಕಲಿಕೆಯನ್ನು ಪ್ರೋತ್ಸಾಹಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಡಿ ಇಟ್ಟ್ಟಿದೆ. ಮದ್ರಸಾ ಮತ್ತು ಮಸೀದಿಗಳಲ್ಲಿ "ಕನ್ನಡ ಕಲಿಕೆ ಮತ್ತು ಸಾಂಸ್ಕೃತಿಕ ಶಿಬಿರ"ಗಳನ್ನು ಹಮ್ಮಿಕೊಳ್ಳಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ. ಈ ಮೂಲಕ ಮದ್ರಸಾ ಮತ್ತು ಮಸೀದಿಗಳಲ್ಲಿ ಕನ್ನಡ ಕಹಳೆ ಮೊಳಗಲಿದೆ.

ಹಲವಾರು ಸಮಸ್ಯೆಗಳ ಕಾರಣ ನಗರ ಪ್ರದೇಶದ ಬಹಳಷ್ಟು ಮುಸ್ಲಿಂ ಬಾಂಧವರು ಕನ್ನಡವನ್ನು ನಿರರ್ಗಳವಾಗಿ ಮಾತನಾಡಲು ಹಾಗೂ ಬರೆಯಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಮದ್ರಸಾಗಳಲ್ಲಿ ಹಾಗೂ ಮಸೀದಿಗಳಲ್ಲಿ ಕನ್ನಡ ಭಾಷಾ ಕಲಿಕೆಯ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.

ಕನ್ನಡ ಕಲಿಕೆಯ ಮೊದಲ ಶಿಬಿರವನ್ನು ಎಚ್ ಬಿಆರ್ ಲೇಔಟ್ ನ ಮೊದಲ ಹಂತದಲ್ಲಿರುವ ಫಲಹೇಧರೆನ್ ಮದ್ರಸಾದಲ್ಲಿ ಭಾನುವಾರ ಆರಂಭಿಸಲಾಗುತ್ತದೆ. ಉದ್ಘಾಟನಾ ಶಿಬಿರದಲ್ಲಿ ಸಂಸದ ಪಿ ಸಿ ಮೋಹನ್, ಶಾಸಕ ಕೆ ಜೆ ಜಾರ್ಜ್ ಹಾಗೂ ಹನೀಫ್ ಅಪ್ಸರ್ ಅನೀಜ್ ಅವರು ಭಾಗವಹಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+