ಕೊಡಗಿನಲ್ಲಿ ಮಳೆಯಾದರೆ ಸುದ್ದಿಯಾಗುವುದಿಲ್ಲ!

ಇಷ್ಟರಲ್ಲಿಯೇ ಮಳೆ ಆರಂಭವಾಗಬೇಕಿತ್ತಾದರೂ ಇದೀಗ ತಡವಾಗಿ ಪ್ರಾರಂಭವಾಗಿರುವುದರಿಂದ ರೈತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಮಳೆಗಾಲ ಪ್ರಾರಂಭವಾಗುತ್ತಿದ್ದಂತೆಯೇ ಕೃಷಿಕರು ಭತ್ತದ ಕೃಷಿಗೆ ಒತ್ತುಕೊಟ್ಟು ಗದ್ದೆ ಉಳುಮೆ, ಗೊಬ್ಬರ ಹಾಕುವುದು ಹೀಗೆ ವಿವಿಧ ಕೆಲಸಗಳಲ್ಲಿ ನಿರತರಾಗಿರುವ ದೃಶ್ಯ ಜಿಲ್ಲೆಯಾದ್ಯಂತ ಇರುವ ಗದ್ದೆ ಬಯಲುಗಳಲ್ಲಿ ಕಂಡು ಬರುತ್ತದೆ.
ಮಳೆ ಬೀಳುತ್ತಿದ್ದಂತೆಯೇ ಇಲ್ಲಿನ ಕೃಷಿಕರಿಗೆ ಬಿಡುವಿಲ್ಲದ ದುಡಿಮೆ. ಕಾಫಿ ತೋಟಕ್ಕೆ ಗೊಬ್ಬರ ಹಾಕುವುದು, ಮರ ಕಪಾತ್ ಮುಂತಾದ ಕೆಲಸಗಳನ್ನು ಅಗತ್ಯವಾಗಿ ಮಾಡಬೇಕಾಗಿರುವುದರಿಂದ ಕೂಲಿ ಕಾರ್ಮಿಕರಿಗೆ ಡಿಮ್ಯಾಂಡೋ ಡಿಮ್ಯಾಂಡಾಗಿದೆ. ಈಗಿನ ಕಾಲದಲ್ಲಿ ಎಂಥ ಕೆಲಸಕ್ಕೂ ಜನ ಸಿಗುತ್ತಾರೆ. ಆದರೆ, ಉಳುವುದಕ್ಕೆ, ಮರ ಹತ್ತಿ ಕಾಯಿ ಕೀಳುವುದಕ್ಕೆ, ಕಾಳು ಕಡಿ ಒಟ್ಟುಮಾಡುವುದಕ್ಕೆ ಕೂಲಿಕಾರರು ಸಿಗುವುದಿಲ್ಲ. ಅವರಿಗಿರುವಷ್ಟು ಬೇಡಿಕೆ ನಿಮಗೂ ಇಲ್ಲ, ನಮಗೂ ಇಲ್ಲ.
ಮತ್ತೊಂದೆಡೆ ಭಾಗಮಂಡಲ, ಬಲಮುರಿ, ನೆಲ್ಯಹುದಿಕೇರಿ ಮುಂತಾದ ನದಿ ತೀರದ ಪ್ರದೇಶಗಳಲ್ಲಿ ವಾಸವಿರುವ ಜನರಲ್ಲಿ ಆತಂಕ ಪ್ರಾರಂಭವಾಗಿದೆ. ಏಕೆಂದರೆ ಮಳೆಗೆ ನೆರೆ ಬಂದರೆ ಈ ಪ್ರದೇಶಗಳು ಮುಳುಗಡೆಯಾಗುತ್ತವೆ. ಆಗ ತಾವು ಕಷ್ಟಪಟ್ಟು ದುಡಿದುದೆಲ್ಲವನ್ನೂ ಬಿಟ್ಟು ಗಂಜಿ ಕೇಂದ್ರ ಸೇರಬೇಕಾಗುತ್ತದೆ. ಹೀಗಾಗಿ ತಮ್ಮ ಬದುಕು ನೀರು ಪಾಲಾಗುತ್ತದೆಯಲ್ಲ ಎಂಬ ಭೀತಿ ಇಲ್ಲಿನವರದ್ದಾಗಿದೆ.
ಇನ್ನು ತಲಕಾವೇರಿ, ಭಾಗಮಂಡಲ ಸೇರಿದಂತೆ ಕೆಲವು ಪ್ರದೇಶಗಳು ಸಂಪರ್ಕ ಕಳೆದುಕೊಂಡು ದ್ವೀಪಗಳಾಗಿಬಿಡುತ್ತವೆ ಇಂತಹ ಪ್ರದೇಶಗಳ ಜನ ಇದೀಗ ಮಳೆಗಾಲಕ್ಕೆ ಬೇಕಾದ ಸಾಮಾನು, ಸರಂಜಾಮುಗಳನ್ನು ಶೇಖರಿಸುವಲ್ಲಿ ತೊಡಗಿದ್ದಾರೆ.ಮಳೆಗಾಲದಲ್ಲಿ ಮಳೆ ಗಾಳಿಗೆ ಅಲ್ಲಲ್ಲಿ ಮರಗಳು ಧರೆಗೆ ಉರುಳುವುದರಿಂದ ವಾರಾನುಗಟ್ಟಲೆ ವಿದ್ಯುತ್, ದೂರವಾಣಿ ಸಂಪರ್ಕವಿಲ್ಲದೆ ದಿನಕಳೆಯ ಬೇಕಾದ ದುಸ್ಥಿತಿ ಇಲ್ಲಿನವರದ್ದಾಗಿದೆ. ಒಟ್ಟಾರೆ ಕೊಡಗಿನಲ್ಲಿ ಮಳೆಗಾಲ ಬಂತೆಂದರೆ ಎಷ್ಟು ಅನುಕೂಲವೋ ಅಷ್ಟೇ ಅನಾನುಕೂಲವೂ ಇದೆ. ಆದರೆ ಅದ್ಯಾವುದಕ್ಕೂ ಜಗ್ಗದೆ ಜಡಿ ಮಳೆಗೆ ಮೈಯೊಡ್ಡಿ ನಿಲ್ಲುವುದು ನಮಗೆಲ್ಲ ಅಭ್ಯಾಸವಾಗಿ ಹೋಗಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications