ಭಾರತಿ ವಿಷ್ಣು ಸೇರಿದಂತೆ 16 ಮಂದಿಗೆ ರಾಣಿ ಚೆನ್ನಮ್ಮ ಪ್ರಶಸ್ತಿ

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಂಸ್ಥೆಗಳಿಗೆ ತಲಾ ರು.25 ಸಾವಿರ ನಗದು ಬಹುಮಾನ ಹಾಗೂ ವೈಯಕ್ತಿಕ ವಿಭಾಗದಲ್ಲಿ ರು.10 ಸಾವಿರ ನಗದು ಬಹುಮಾನ ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ. ಜೂ.16ರಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಉತ್ತಮ ಸಾಧನೆ ಮಾಡಿರುವ ಮೂರು ಸ್ತ್ರೀಶಕ್ತಿ ಗುಂಪುಗಳಿಗೆ 2009-10ನೇ ಸಾಲಿನ 'ಯಶೋಧರಮ್ಮ ದಾಸಪ್ಪ ಪ್ರಶಸ್ತಿ'ಗಳನ್ನು ಪ್ರದಾನ ಮಾಡಲಾಗುತ್ತದೆ.
ವೈಯಕ್ತಿಕ ವಿಭಾಗದಲ್ಲಿ ಬೆಂಗಳೂರಿನ ಹೇಮಾ ದೇಶಪಾಂಡೆ, ಶಿವಮೊಗ್ಗ ವಿನೋಭಾನಗರದ ಎಸ್ ವಿ ಚಂದ್ರಕಲಾ, ಬೆಂಗಳೂರಿನ ಮೇರಿ ಅಕ್ಕಮ್ಮನ್, ಕೊಪ್ಪಳದ ಸತ್ಯಾನಂದಪುರದ ವಿಜಯಾ ಎಸ್.ಹಿರೇಮಠ, ತರೀಕೆರೆಯ ಪ್ರಗತಿ ಮಹಿಳಾ ಸಮಾಜದ ಸಂಸ್ಥಾಪಕಿ ಎ ಎಸ್ ಕಮಾಲಾದೇವಿ, ಧಾರವಾಡದ ದಕ್ಷಾಯಿಣಿ ಬಸವರಾಜ ಸಟ್ಟೂರ, ಬಿಜಾಪುರದ ಶಾಂತಾಬಾಯಿ ಹಾಗೂ ಕುಷ್ಟಗಿಯ ಬುತ್ತಿ ಬಸವೇಶ್ವರನಗರದ ರೇಣುಕಾ ಪವಾರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಲಾ ವಿಭಾಗದಲ್ಲಿ ಭಾರತಿ ವಿಷ್ಣುವರ್ಧನ್, ಗೀತಾಬಾಲಿ ಮತ್ತು ಬಳ್ಳಾರಿಯ ಪದ್ಮಮ್ಮ, ಸಾಹಿತ್ಯ ವಿಭಾಗದಲ್ಲಿ ಮಡಿಕೇರಿಯ ಅಪರ್ಣಾ ಮಂಜುನಾಥ ಹುಲಿಸಾಲ, ಬಸವನ ಬಾಗೇವಾಡಿಯ ಪ್ರಭಾವತಿ ಎಸ್ ದೇಸಾಯಿ ಹಾಗೊ ಗಂಗಾವತಿಯ ಸಾಲಿಮಾ ಎಂ. ಮಂಗಳೂರು ಹಾಗೂ ಕ್ರೀಡಾ ವಿಭಾಗದಲ್ಲಿ ಬೆಂಗಳೂರಿನ ಎಂ ಮಂಜುಳಾ, ಮಡಿಕೇರಿಯ ಪಿ ಎಂ ಶೈಲಜಾ ಅವರನ್ನು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಂಸ್ಥೆಗಳ ವಿಭಾಗದಲ್ಲಿ ಕೋಲಾರದ ಸರಸ್ವತಿ ಮಹಿಳಾ ಮಂಡಳಿ, ಕೆಸ್ತೂರಿನ ನಿಸರ್ಗ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಹುಬ್ಬಳ್ಳಿಯ ಸುರಭಿ ಮಹಿಳಾ ಸಂಘ, ಬೆಳಗಾವಿಯ ಆಶಾಜ್ಯೋತಿ ಮಹಿಳಾ ಅಭಿವೃದ್ಧಿ ಕೇಂದ್ರ, ಕೊಪ್ಪಳದ ಅಕ್ಕಮಹಾದೇವಿ ಮಹಿಳಾ ಮಂಡಳಿ ಹಾಗೂ ಮೈಸೂರಿನ ಜ್ಞಾನಜ್ಯೋತಿ ಸಂಸ್ಥೆಯನ್ನು ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications