ಅಪ್ಪನ ಕೊಲೆಗೆ ಸುಪಾರಿ ನೀಡಿದ ಕುಲಪುತ್ರ

ಓಎಂಬಿಆರ್ ಲೇಔಟ್ ನ ನಿವಾಸಿಯಾದ ಲ್ಯಾಂಡ್ ಡೆವಲಪರ್ ಶಂಕರಪ್ಪ(50) ಅವರು ನೀಡಿದ ದೂರಿನ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನ ಮಗ ಅಶೋಕ್(28), ಜಯಂತಿ(32),ಮಂಜುಳ(30), ಕಾಂತ(32), ರಾಮು(24) ಮುಂತಾದವರನ್ನು ಬಂಧಿಸಿದ್ದಾರೆ.
ಘಟನೆ ಹಿನ್ನೆಲೆ : ರಿಯಲ್ ಎಸ್ಟೇಟ್ ಉದ್ಯಮಿ ಶಂಕರಪ್ಪ ಅವರಿಗೆ ಇಬ್ಬರು ಹೆಂಡತಿಯರು. ಮೊದಲ ಹೆಂಡತಿಗೆ ಮೂವರು ಹಾಗೂ ಎರಡನೇ ಹೆಂಡತಿಗೆ ಇಬ್ಬರು ಮಕ್ಕಳು. ಇಬ್ಬರು ಪತ್ನಿಯರಿಗೆ ಸ್ವಂತ ಮನೆ ವ್ಯವಸ್ಥೆಯನ್ನು ಶಂಕರಪ್ಪ ಮಾಡಿದ್ದಾರೆ.
ಹಿರಿಯ ಪತ್ನಿಯ ಮಗನಾದ ಆರೋಪಿ ಅಶೋಕ, ತನ್ನ ತಂದೆಯ ಎರಡನೇ ಮದುವೆಗೆ ವಿರೋಧಿಸುತ್ತಾ ಬಂದಿದ್ದ, ನನಗೆ ಹಾಗೂ ನನ್ನ ತಾಯಿಗೆ ಅನ್ಯಾಯವಾಗಿದೆ ಎಂದು ಪರಿಗಣಿಸಿ, 8 ಜನರಿಗೆ 13ಲಕ್ಷ ರು ಸುಪಾರಿ ಕೊಟ್ಟು, ತನ್ನ ತಂದೆ ಶಂಕರಪ್ಪನನ್ನು ಕೊಲೆ ಮಾಡಲು ಹೇಳಿದ್ದ.
ಆದರೆ, ಶಂಕರಪ್ಪ ಅವರ ದೂರು ಸ್ವೀಕರಿಸಿದ ತಕ್ಷಣ ಕಾರ್ಯ ಪ್ರವೃತ್ತರಾದ ಎಸಿಪಿ ಎನ್ ನರಸಿಂಹಯ್ಯ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಅವರ ತಂಡ,ಆರೋಪಿ ಹಾಗೂ ಅವನ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications