ರೈಲ್ವೆ ನೇಮಕಾತಿ ಬಹುಕೋಟಿ ಹಗರಣಕ್ಕೆ ಹೊಸ ತಿರುವು

ರೈಲ್ವೆ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಬಹುಕೋಟಿ ಅವ್ಯವಹಾರವನ್ನು ಸಿಬಿಐ ಶುಕ್ರವಾರ ಬಯಲು ಮಾಡಿತ್ತು. ಹಣಕ್ಕಾಗಿ ರೈಲ್ವೆ ನೇಮಕಾತಿ ಪ್ರಶ್ನೆಪತ್ರಿಕೆಗಳನ್ನು ಮಾರಿಕೊಂಡ ಎಂಟು ಮಂದಿ ಭ್ರಷ್ಟ ಅಧಿಕಾರಿಗಳನ್ನು ಸಿಬಿಐ ಬಂಧಿಸಿತ್ತು. ಬಂಧಿತರಲ್ಲಿ ಮುಂಬೈ ಆರ್ ಆರ್ ಬಿಯ ಮುಖ್ಯಸ್ಥ ಎಸ್ ಎಂ ಶರ್ಮಾ ಅವರ ಪುತ್ರ ವಿವೇಕ್, ರಾಯ್ಪುರದ ಹಿಂದಿನ ರೈಲ್ವೆ ವಿಭಾಗೀಯ ಹೆಚ್ಚುವರಿ ವ್ಯವಸ್ಥಾಪಕ ಜಗನ್ನಾಥಮ್ ಸೇರಿದ್ದರು.
ಮುಂಬೈ, ಬೆಂಗಳೂರು, ರಾಯ್ಪುರ, ಕೋಲ್ಕತ್ತ ಹಾಗೂ ಹೈದರಾಬಾದ್ ನಲ್ಲಿ ಸಿಬಿಐ ಏಕಕಾಲಕ್ಕೆ ದಾಳಿ ಮಾಡಿತ್ತು. ಅಸಿಸ್ಟೆಂಟ್ ಲೋಕೊ ಪೈಲಟ್ ಹಾಗೂ ಅಸಿಸ್ಟೆಂಟ್ ಸ್ಟೇಶನ್ ಮಾಸ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ನಡೆದ ಬಹುಕೋಟಿ ಅವ್ಯವಹಾರವಿದು.
ಬಹುಕೋಟಿ ಹಗರಣದ ನಂಟು ಬೆಂಗಳೂರಿನವರೆಗೂ ವಿಸ್ತರಿಸಿದೆ. ಬೆಂಗಳೂರಿನ ಹೋಟೆಲ್ ಒಂದರಲ್ಲಿ ಅವಿತಿದ್ದ ಜಗನ್ನಾಥ್ ಅವರನ್ನು ಸಿಬಿಐ ಬಂಧಿಸಿತ್ತು. ಇವರು ಇತ್ತೀಚಗಷ್ಟೇ ರಾಯ್ಪುರದಿಂದ ಬೆಂಗಳೂರಿಗೆ ವರ್ಗಾವಣೆಯಾಗಿದ್ದರು. ವಿವೇಕ್ ಬಂಧನದ ಹಿನ್ನೆಲೆಯಲ್ಲಿ ಅವರ ತಂದೆ ಆರ್ ಆರ್ ಬಿ ಮುಖ್ಯಸ್ಥ ಎಸ್ ಎಂ ಶರ್ಮಾ ಅವರನ್ನು ರೈಲ್ವೆ ಇಲಾಖೆ ಅಮಾನತು ಮಾಡಿ ವಿಚಾರಣೆಗೆ ಆದೇಶಿಸಿದೆ.
ಆಯ್ಕೆಯಾದ ಪ್ರತಿ ಅಭ್ಯರ್ಥಿಯೂ ರು.3.5 ಲಕ್ಷ ಕೊಡಬೇಕಾಗಿತ್ತು. ಹಣ ಸಂದಾಯವಾಗುವ ತನಕ ಅಭ್ಯರ್ಥಿಗಳು ತಮ್ಮ ಮೂಲ ಪ್ರಮಾಣ ಪತ್ರಗಳನ್ನು ಜಗನ್ನಾಥಂ ಬಳಿ ಇಡಬೇಕಾಗಿತ್ತು. ಹಣ ಕೊಡಲು ಒಪ್ಪಿಕೊಂಡ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಒಂದು ದಿನ ಮುನ್ನವೇ ಪ್ರಶ್ನೆಪತ್ರಿಕೆಯನ್ನು ಈ ಜಾಲ ತಲುಪಿಸುತ್ತ್ತಿತ್ತು.
ಹಗರಣ ಪ್ರಮುಖ ರೂವಾರಿ ಜಗನ್ನಾಥಂ ಆರ್ ಆರ್ ಬಿ ಅಧಿಕಾರಿಗಳೊಂದಿಗೆ ರು. 1 ಕೋಟಿಗೆ ಒಪ್ಪಂದ ಕುದುರಿಸಿಕೊಂಡಿದ್ದ. ಈಗಾಗಲೆ ರು.55 ಲಕ್ಷಗಳನ್ನು ಅಧಿಕಾರಿಗಳಿಗೆ ಪಾವತಿ ಮಾಡಲಾಗಿದೆ ಎಂದು ಸಿಬಿಐ ತಿಳಿಸಿದೆ. ಜಗನ್ನಾಥಂ ತಂಗಿದ್ದ ಹೋಟೆಲ್ ನಲ್ಲಿ ರು.12 ಲಕ್ಷ ಪತ್ತೆಯಾಗಿದೆ. ಸಿಬಿಐ ದಾಳಿಯ ಹಿನ್ನೆಲೆಯಲ್ಲಿ ಜೂನ್ 27ರಂದು ನಡೆಯಬೇಕಾಗಿದ್ದ ಆರ್ ಆರ್ ಬಿ ಪರೀಕ್ಷೆಯನ್ನು ಮುಂದೂಡುವ ನಿರ್ಧಾರವನ್ನು ರೈಲ್ವೆ ಇಲಾಖೆ ಪ್ರಕಟಿಸಿಲ್ಲ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications