ಮಾಜಿ ಕಾರ್ಪೊರೇಟರ್ ಮೇಲೆ ಹಲ್ಲೆ

ತೀವ್ರವಾಗಿ ಗಾಯಗೊಂಡಿರುವ ಗೋವಿಂದರಾಜು ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರು ಅಸ್ಪತ್ರೆಗೆ ಭೇಟಿ ನೀಡಿ ಗೋವಿಂದರಾಜು ಅವರ ಆರೋಗ್ಯ ವಿಚಾರಿಸಿದ್ದಾರೆ.
ಇಂದು ಬೆಳಗ್ಗೆ ಮಲ್ಲೇಶ್ವರಂನ ಹೋಟೆಲ್ ವೊಂದರಲ್ಲಿ ಗೊವಿಂದರಾಜು ಅವರು ಕಾಫಿ ಕುಡಿಯುತ್ತಿದ್ದ ಸಮಯದಲ್ಲಿ ಅವರ ಮೇಲೆ ಮೂರು ಜನ ದುಷ್ಕರ್ಮಿಗಳ ತಂಡ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.
ದುಷ್ಕೃತ್ಯಗೈದವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗೋವಿಂದರಾಜು ಸುಭಾಷ್ ನಗರ ವಾರ್ಡ್ ನ ಮಾಜಿ ನಗರಪಾಲಿಕೆ ಸದಸ್ಯರಾಗಿದ್ದಾರೆ.











Click it and Unblock the Notifications