ಗಡಿಯಲ್ಲಿ ಕರವೇ ಹೊಗೆ ಹತ್ತಿಕ್ಕಿದ್ದ ಪೊಲೀಸರು

ನಗರದಿಂದ 40 ಕಿ.ಮೀ ದೂರದಲ್ಲಿರುವ ಪುಣಜನೂರು ಚೆಕ್ಪೋಸ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಕಾರ್ಯಕರ್ತರು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯುಂಟಾಯಿತು.
ಹೊಗೇನೆಕಲ್ ಜಲಪಾತ ಹಾಗೂ ಭೂ ಪ್ರದೇಶವನ್ನು ತಮಿಳುನಾಡು ಸರ್ಕಾರ ಆಕ್ರಮಿಸಿಕೊಂಡು ಕೋಟ್ಯಂತರ ರು. ವೆಚ್ಚದ ಕಾಮಗಾರಿಯನ್ನು ಆರಂಭಿಸಿದೆ. ಕೇಂದ್ರ ಸರ್ಕಾರ ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದು, ಹಿಂದಿನಿಂದಲೂ ಕರ್ನಾಟಕಕ್ಕೆ ತೀವ್ರ ಅನ್ಯಾಯ ಮಾಡುತ್ತಲೇ ಬಂದಿದೆ ಎಂದು ಆರೋಪಿಸಿದರು.
ಈ ಕಾಮಗಾರಿ ಆರಂಭವಾಗಿರುವುದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯೂ ಪ್ರಮುಖ ಕಾರಣ. ನಮ್ಮ ನೆಲ, ಜಲ ತಮಿಳರ ಪಾಲಾಗುತ್ತಿದ್ದರೂ ಕೈಕಟ್ಟಿ ಕುಳಿತಿರುವ ರಾಜ್ಯ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಪ್ರತಿಭಟನಾಕಾರರನ್ನು ತಡೆದ ಪೊಲೀಸರು ತಮಿಳುನಾಡು ಹಾಗೂ ಕರ್ನಾಟಕದ ಗಡಿಯನ್ನು ಗುರುತಿಸುವ ಕಾರೆಪಾಳ್ಯದ ಬಳಿ ರಸ್ತೆ ತಡೆ ನಡೆಸಿ, ಎರಡೂ ರಾಜ್ಯಗಳ ವಾಹನ ಸಂಚಾರ ಸ್ಥಗಿತಗೊಳಿಸಲು ಕರವೇ ಕಾರ್ಯಕರ್ತ ಹೊರಟಿದ್ದರು.
ಈ ಸಮಯದಲ್ಲಿ ಪುಣಜನೂರು ಚೆಕ್ಪೋಸ್ಟ್ ಬಳಿಯೇ ಇನ್ಸ್ಪೆಕ್ಟರ್ ಪ್ರತಾಪ್ರೆಡ್ಡಿ ನೇತೃತ್ವದ ರಾಜ್ಯ ಪೊಲೀಸರು ಕಾರ್ಯಕರ್ತರನ್ನು ತಡೆದರು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮಂಜುನಾಥಗೌಡ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ ಕೆಲ ಸಮಯದ ನಂತರ ಬಿಡುಗಡೆಗೊಳಿಸಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications