ವಿರಾಜಪೇಟೆಯಲ್ಲಿ ಟೈಂ ಹೋಗುವುದೇ ಗೊತ್ತಾಗುವುದಿಲ್ಲ!

ಈಗ ಅನಾಥವಾಗಿ ನಿಂತಿರುವ ಈ ಸ್ಮಾರಕದತ್ತ ಯಾರು ಕೂಡ ಗಮನಹರಿಸುವಂತೆ ಕಾಣುತ್ತಿಲ್ಲ. ಇದರ ಪಕ್ಕದಲ್ಲಿಯೇ, ಶಾಸಕರು, ಸಚಿವರು, ಅಧಿಕಾರಿಗಳು ದಿನನಿತ್ಯ ಹಾದು ಹೋಗುತ್ತಾರೆ ಆದರೂ ಯಾರೊಬ್ಬರ ಗಮನಕ್ಕೆ ಬಾರದಿರುವುದು ಂಬಂಧಪಟ್ಟವರು ನಿರ್ಲಕ್ಷ್ಯ ತೋರಿಸುತ್ತದೆ.
ಇದು ಕೇಲ ಸಮಯ ಬಿಂಬಿಸುವ ಗಡಿಯಾರವಲ್ಲ. ಕೊಡಗಿನಲ್ಲಿರುವ ಕೆಲವೇ ಕೆಲವು ಸ್ಮಾರಕಗಳಲ್ಲಿ ಇದೂ ಒಂದಾಗಿದೆ. ಇದನ್ನು ದೇವಣಗೇರಿಯ ಸುಬೇದಾರ್ ರಾವ್ ಬಹುದ್ದೂರ್ ಮುಕ್ಕಾಟಿರ ಅಯ್ಯಪ್ಪರವರು ಕೊಲೋನೇಷನ್ ದರ್ಬಾರ್ನಲ್ಲಿ ನಡೆದ ಜಾರ್ಜ್ ದೊರೆಯ ಅಧಿಕಾರ ಸ್ವೀಕಾರ ಸಮಾರಂಭದ ಸವಿನೆನಪಿಗಾಗಿ 1911 ರಲ್ಲಿ ನಿರ್ಮಿಸಿದರೆಂದು ಇತಿಹಾಸ ಹೇಳುತ್ತದೆ.
ಎರಡು ಅಂತಸ್ತಿನ ಗೋಪುರದಲ್ಲಿ ಗಡಿಯಾರವನ್ನು ಅಳವಡಿಸಲಾಗಿದೆ. ಇದು ಬೇರೆಡೆಗಳಲ್ಲಿರುವ ಗಡಿಯಾರ ಕಂಬಗಳಿಗೆ ಹೋಲಿಸಿದರೆ ಸ್ವಲ್ಪ ಮಟ್ಟಿಗೆ ಭಿನ್ನವಾಗಿ ಗೋಚರಿಸುತ್ತದೆ. ವೀರಾಜಪೇಟೆಯಲ್ಲಿ ಏನೇ ಕಾರ್ಯಕ್ರಮ ಉತ್ಸವ, ಮೆರವಣಿಗೆ ನಡೆದರೂ ಅದು ಈ ಗಡಿಯಾರ ಕಂಬವನ್ನು ಹಾದು ಹೋಗಲೇ ಬೇಕು. ಇದು ಮೊದಲಿನಿಂದಲೂ ನಡೆದು ಬಂದ ಸಂಪ್ರದಾಯವಾಗಿದೆ.
ಮಳೆಗಾಳಿಗೆ ಸಿಲುಕಿ ಕಳೆಗುಂದಿದ್ದ ಸ್ಮಾರಕಕ್ಕೆ ಹಿಂದೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿದ್ದ ಬಿ.ಆರ್. ವಿಜಯಚಂದ್ರರವರ ಕಾಲದಲ್ಲಿ ಸುಣ್ಣ ಬಣ್ಣ ಬಳಿಯಲಾಗಿತ್ತು. ಆ ನಂತರ ಫರೂಕ್ ರಹೀಂ ಅಧ್ಯಕ್ಷರಾಗಿದ್ದ ಕಾಲದಲ್ಲಿ ಹಳೆಯ ಗಡಿಯಾರ ತೆಗೆದು ನೂತನ ಟೈಟಾನ್ ಗಡಿಯಾರ ಅಳವಡಿಸಲಾಯಿತು. ಕಾಂತಿಬೆಳ್ಯಪ್ಪ ಅವರು ಅಧ್ಯಕ್ಷರಾಗಿದ್ದ ಕಾಲದಲ್ಲಿ ಗಡಿಯಾರ ಕೆಟ್ಟು ಹೋಗಿತ್ತಾದರೂ ಅದನ್ನು ದುರಸ್ತಿ ಮಾಡಿಸಿದ್ದರು.
ಈಗ ಮತ್ತೆ ಕೆಟ್ಟು ಹೋಗಿ ಆರು ತಿಂಗಳಾಗಿದೆ ಇನ್ನೂ ಕೂಡ ಸಂಬಂಧಿಸಿದವರು ಇತ್ತ ಗಮನಹರಿಸಿದಂತೆ ಕಾಣುತ್ತಿಲ್ಲ. ಕೂಡಲೇ ಗಡಿಯಾರವನ್ನು ದುರಸ್ತಿ ಮಾಡಿ ಆ ಮೂಲಕ ಐತಿಹಾಸಿಕ ಸ್ಮಾರಕಕ್ಕೆ ಗೌರವ ನೀಡಲಿ ಎನ್ನುವುದು ಸಾರ್ವಜನಿಕರ ಮನವಿ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications