ಲೋಕಾಯುಕ್ತ ರಾಜೀನಾಮೆ: ನಮ್ಮ ಕೈವಾಡವಿಲ್ಲ

ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜರ್ನಾದನರೆಡ್ಡಿ ಅವರು, ಅಕ್ರಮ ಗಣಿಗಾರಿಕೆ ನಡೆದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ನಾವಾಗಲಿ(ರೆಡ್ಡಿ ಸೋದರರು) ನಮ್ಮ ಸರ್ಕಾರವಾಗಲಿ ಸಂತೋಷ್ ಹೆಗಡೆ ಅವರಿಗೆ ಕಿರುಕುಳ ನೀಡಿಲ್ಲ. ಯಾವ ಬೆದರಿಕೆಯನ್ನು ಒಡ್ಡಿಲ್ಲ. ಅವರು ರಾಜೀನಾಮೆ ನೀಡುವ ಅವಶ್ಯಕತೆ ಇರಲಿಲ್ಲ ಎಂದಿದ್ದಾರೆ.
ಉಪ ಲೋಕಾಯುಕ್ತರ ನೇಮಕ, ಲೋಕಾಯುಕ್ತರಿಗೆ ಪರಮಾಧಿಕಾರ ನೀಡುವುದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಬೇಕಿರುವ ವಿಷಯ. ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
ಲೋಕಾಯುಕ್ತರು ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಿದ್ದರು. ಅವರ ಈ ದಿಢೀರ್ ನಿರ್ಧಾರ ಅಚ್ಚರಿ ತಂದಿದೆ. ಸಂತೋಷ್ ಹೆಗ್ಡೆ ಅವರ ಮನವೊಲಿಕೆ ಪ್ರಯತ್ನ ನಡೆಯುತ್ತಿದೆ. ಅವರು ಅಧಿಕಾರಕ್ಕೆ ಮರಳಿದರೆ ನಮ್ಮ ಅಭ್ಯಂತರವಿಲ್ಲ ಎಂದು ಜರ್ನಾದನ ರೆಡ್ಡಿ ಹೇಳಿದರು.












Click it and Unblock the Notifications