ಫುಟ್ಬಾಲ್ ಕ್ರೇಜ್: ಬೆಂಗ್ಳೂರ್ ಹುಡ್ಗ ಆತ್ಮಹತ್ಯೆ ಯತ್ನ!

ಸೈಂಟ್ ಮೀರಾಸ್ ಇನ್ಸ್ ಸ್ಟಿಟ್ಯೂಟ್ ನ ವಿದ್ಯಾರ್ಥಿಯಾದ 17 ವರ್ಷದ ಯುವಕ ಕೆವಿನ್ ಪೀಟರ್ ಗೆ ಫುಟ್ಬಾಲ್ ಅಂದರೆ ಪಂಚಪ್ರಾಣ. ಆದರೆ, ಮಧ್ಯರಾತ್ರಿಯಾದರೂ ಮಗ ಟಿವಿಗೆ ಅಂಟಿಕೊಂಡು, ಫುಟ್ಬಾಲ್ ಪಂದ್ಯ ವೀಕ್ಷಿಸುವುದನ್ನು ಕಂಡ ಪೋಷಕರು ಆತಂಕಗೊಂಡು ಕೊಂಚ ಜೋರಾಗಿ ಗದರಿಸಿದ್ದಾರೆ.
ಫೀಫಾ ವಿಶ್ವಕಪ್ 2010 : ವಿಶ್ವಕಪ್ ವೇಳಾಪಟ್ಟಿ || ಅಂಕಗಳ ಪಟ್ಟಿ ||
ಮಂಗಳವಾರ ಕಳೆದ ಬಾರಿಯ ರನ್ನರ್ ಅಪ್ ಫ್ರಾನ್ಸ್ ಹಾಗೂ ಅತಿಥೇಯ ದಕ್ಷಿಣ ಆಫ್ರಿಕಾ ಪಂದ್ಯ ಹಾಗೂ ಮೆಕ್ಸಿಕೊ, ಉರುಗ್ವೆ ಪಂದ್ಯವಿತ್ತು. ಈ ಮಹತ್ವದ ಪಂದ್ಯವನ್ನು ನೋಡಲು ಕೆವಿನ್ ಟ್ಯೂಷನ್ ಗೆ ಹೋಗದೇ ಮನೆಗೆ ಬಂದು ಟಿವಿ ಮುಂದೆ ಕೂತಿದ್ದ.
ಇದನ್ನು ನೋಡಿದ ಆತನ ಪೋಷಕರು, ಟಿವಿ ಆಫ್ ಮಾಡಿ ಟ್ಯೂಷನ್ ಗೆ ಹೋಗುವಂತೆ ಹೇಳಿ ಗದರಿಸಿದ್ದಾರೆ. ಪೋಷಕರ ಮಾತಿಗೆ ಪ್ರತಿ ಹೇಳದೆ ತನ್ನ ಕೋಣೆ ಸೇರಿದ ಕೆವಿನ್ , ಜಿರಳೆ ಸಾಯಿಸುವ ಔಷಧಿಯನ್ನು ತೆಗೆದುಕೊಂಡು ಬಾಯಿಗೆ ಸುರಿದುಕೊಂಡಿದ್ದಾನೆ.
ವಿಡಿಯೋಗಳು : ವಿಶ್ವಕಪ್ ಆಶಯ ಗೀತೆ || ಗಾಯಕಿ ಶಕೀರಾ ಗೀತೆ || ಎಕಾನ್ ಹಾಡಿದ ಆಫ್ರಿಕಾ ಗೀತೆ ||
ರಾತ್ರಿ ಸುಮಾರು 9 ಗಂಟೆ ವೇಳೆಗೆ ಊಟಕ್ಕೆ ಕರೆಯಲು ಕೆವಿನ್ ನ ತಾಯಿ ಕೋಣೆಗೆ ಹೋದಾಗ, ಉಸಿರಾಡಲು ತೊಂದರೆಪಡುತ್ತಾ ಬಿದ್ದಿದ್ದ ಮಗನನ್ನು ನೋಡಿ ದಿಗ್ಭ್ರಾಂತರಾಗಿ, ಕೂಡಲೇ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಕೆವಿನ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅತ್ಯಹತ್ಯೆ ಪ್ರಯತ್ನ ಎಂದು ಕೇಸ್ ದಾಖಲಿಸಿಕೊಳ್ಳಲಾಗಿದ್ದು, ಪೋಷಕರ ಬೈಗುಳದಿಂದ ನೊಂದು ಪ್ರಾಣ ಕಳೆದುಕೊಳ್ಳಲು ಯತ್ನಿಸಿದ ಎಂದು ಮಾಹಿತಿ ಸಿಕ್ಕಿದೆ. ತನಿಖೆ ಮುಂದುವರೆದಿದೆ ಎಂದು ಎಎಸ್ ಐ ವೆಂಕಟೇಶ್ ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications