ಸೇಡು ತೀರಿಸಿಕೊಳ್ಳಲು ಮೆಕ್ಸಿಕೋ ತಹತಹ

2006ರಲ್ಲಿ ಇದೇ ಹಂತದಲ್ಲಿ ಮೆಕ್ಸಿಕೋ ತಂಡ ಅರ್ಜೆಂಟಿನಾ ವಿರುದ್ಧ ಸೋತು ವಿಶ್ವಕಪ್ ನಿಂದ ಹೊರಬಿದ್ದಿತ್ತು. 1970 ಮತ್ತು 1986ರಲ್ಲಿ ಮಾತ್ರ ಕ್ವಾರ್ಟರ್ ಫೈನಲ್ ತಲುಪಲು ಮೆಕ್ಸಿಕೋ ಸಫಲವಾಗಿತ್ತು.
ಉರುಗ್ವೆ ವಿರುದ್ಧ ಏಕೈಕ ಗೋಲಿನಿಂದ ಸೋತ ಮೆಕ್ಸಿಕೋ ಭಾರೀ ಒತ್ತಡದಲ್ಲಿದೆ. ಸೋಲಿಗೆ ಅಭಿಮಾನಿಗಳಿಂದ ಮತ್ತು ಮಾಧ್ಯಮಗಳಿಂದ ಕೂಡ ಟೀಕೆ ಎದುರಿಸಿತ್ತು ಮೆಕ್ಸಿಕೋ. ಆದರೆ, ಸೋಲಿಲ್ಲದ ಸರದಾರನಾಗಿ ಹೊರಹೊಮ್ಮಿರುವ ಡಿಯಾಗೋ ಮರಡೋನಾ ಕೈಕೆಳಗೆ ಪಳಗಿರುವ ಅರ್ಜೆಂಟಿನಾ ಭರ್ಜರಿ ಗೆಲುವುಗಳಿಂದ ಮತ್ತು ಆತ್ಮವಿಶ್ವಾಸದಿಂದ ಬೀಗುತ್ತಿದೆ.
ಅರ್ಜೆಂಟಿನಾದ ಪ್ರಮುಖ ಆಟಗಾರ ಮೆಸ್ಸಿಯನ್ನು ಕಟ್ಟಿಹಾಕಲು ಮತ್ತು ಗೋಲು ಹೊಡೆಯದಂತೆ ತಡೆಯಲು ಯೋಜನೆ ರೂಪಿಸಲಾಗಿದೆ ಎಂದು ಮೆಕ್ಸಿಕೋ ನಾಯಕ ಮಾರ್ಕ್ವೆಜ್ ಹೇಳಿದ್ದಾರೆ. ಮೆಸ್ಸಿ ಯಾವುದೇ ಕ್ಷಣದಲ್ಲಿ ಪಂದ್ಯದ ಗತಿ ಬದಲಿಸಬಲ್ಲ. ಆತನಿಗೆ ಚೆಂಡು ಸಿಗದಂತೆ ಮಾಡುವುದು ನಮ್ಮ ಗುರಿ ಎಂದು ಮಾರ್ಕ್ವೆಜ್ ನುಡಿದಿದ್ದಾರೆ.
ನೆದರ್ಲ್ಯಾಂಡ್ ಹೊರತುಪಡಿಸಿದರೆ ಅರ್ಜೆಂಟಿನಾ ಮಾತ್ರ ಈ ವಿಶ್ವಕಪ್ ನಲ್ಲಿ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಎರಡೂ ತಂಡಗಳ ತಾಳಮೇಳ ಗಮನಿಸಿದರೆ ಅರ್ಜೆಂಟಿನಾ ಖಂಡಿತ ಗೆಲ್ಲುವ ಫೆವರಿಟ್ ತಂಡವಾಗಿದೆ. ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ್ದರೂ ಅರ್ಜೆಂಟಿನಾ ಗ್ರೀಸ್ ವಿರುದ್ಧ ವಿಜಯ ಸಾಧಿಸಿತ್ತು. ಇಂದಿನ ಪಂದ್ಯದಲ್ಲಿ ಟಾವೆಜ್ ಮತ್ತು ಹಿಗ್ವೇನ್ ತಂಡಕ್ಕೆ ಮರಳುತ್ತಿರುವುದರಿಂದ ಮತ್ತಷ್ಟು ಬಲಿಷ್ಠವಾಗಲಿದೆ.
ಈ ಪಂದ್ಯದಲ್ಲಿ ಗೆಲುವು ಸಾಧಿಸಿದವರು ಕ್ವಾರ್ಟರ್ ಫೈನಲ್ ನಲ್ಲಿ ಭಾನುವಾರ ಇಂಗ್ಲೆಂಡ್ ಅಥವಾ ಜರ್ಮನಿಯನ್ನು ಎದುರಿಸಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications