ಘಟಾನುಘಟಿಗಳ ಮಾತಿನ ಸಮರಕ್ಕೆ ಸದನ ಸಜ್ಜು

ಚರ್ಚೆಗೆ ಬರಲಿರುವ ಪ್ರಮುಖ ವಿಷಯಗಳು: ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ರಾಜೀನಾಮೆ, ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿರುವ ಅತ್ಯಾಚಾರ ಆರೋಪಿ ಹಾಲಪ್ಪನ ಕಥೆ, ಹಾವೇರಿ ಗೋಲಿಬಾರ್ ನ್ಯಾ. ಜಗನ್ನಾಥ್ ಶೆಟ್ಟಿ ವರದಿ, ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವುದು, ಆಸರೆ ಯೋಜನೆಯಲ್ಲಿನ ಲೋಪ ದೋಷಗಳು, ಸಾಧನಾ ಸಮಾವೇಶದ ಖರ್ಚುವೆಚ್ಚ,, ಬಿತ್ತನೆ ಬೀಜ ಅವ್ಯವಹಾರ, ಕುಡಿಯುವ ನೀರಿಗೆ ಎದ್ದಿರುವ ಹಾಹಾಕಾರ.. ಹೀಗೆ ಅನೇಕಾನೇಕ ಸಮಸ್ಯೆಗಳಪಟ್ಟಿಯನ್ನು ಪ್ರತಿಪಕ್ಷಗಳು ತಯಾರಿಸಿಕೊಂಡಿವೆ.
ಬಿಜೆಪಿಯೂ ಸಮರಕ್ಕೆ ಸಿದ್ಧ: ಎರಡು ವರ್ಷ ಅಧಿಕಾರ ಪೂರೈಸಿದ ಸಂಭ್ರಮದಲ್ಲಿರುವ ಬಿಜೆಪಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಯಡಿಯೂರಪ್ಪ ಅವರು ಕೂಡ ಪ್ರತಿಪಕ್ಷಗಳ ಆಂತರಿಕ ಕಚ್ಚಾಟ, ಹುಳುಕುಗಳನ್ನು ಎತ್ತಿ ತೋರಿಸಲು ನಿರ್ಧರಿಸಿದ್ದಾರೆ. ಎರಡು ವರ್ಷಗಳ ಸಾಧನೆ ಪಟ್ಟಿಯನ್ನು ಸದನದಲ್ಲಿ ಮಂಡಿಸಿ, ಪ್ರತಿಪಕ್ಷಗಳ ಬಾಯಿ ಮುಚ್ಚಿಸಲು ಸನ್ನದ್ಧರಾಗಿದ್ದಾರೆ. ಕಾಂಗ್ರೆಸ್ ನಿಂದ ನೆರೆ ಪರಿಹಾರ ನಿಧಿ ದುರ್ಬಳಕೆ ಪ್ರಮುಖ ಆಸ್ತ್ರವಾಗುವ ಎಲ್ಲಾ ಸಾಧ್ಯತೆಗಳಿವೆ.
ಹಲವು ವಿಧೇಯಕಗಳ ಮಂಡನೆ: ಸುಮಾರು 25 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಅಕ್ರಮ ಸಕ್ರಮ ವಿಧೇಯಕ ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ವಿಧೇಯಕಗಳು ಮಂಡನೆಯಾಗಲಿದ್ದು, ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಪರಸ್ಪರ ಕೆಸರೆರಚಾಟದಲ್ಲಿ ವಿಧೇಯಕಗಳ ಬಗ್ಗೆ ಚರ್ಚೆ ನಡೆಯುವುದು ಸಾಧ್ಯವೇ ಎಂಬ ಅನುಮಾನ ಶ್ರೀಸಾಮಾನ್ಯನನ್ನು ಕಾಡುತ್ತಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications