ಘಟಾನುಘಟಿಗಳ ಮಾತಿನ ಸಮರಕ್ಕೆ ಸದನ ಸಜ್ಜು

ಚರ್ಚೆಗೆ ಬರಲಿರುವ ಪ್ರಮುಖ ವಿಷಯಗಳು: ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ರಾಜೀನಾಮೆ, ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿರುವ ಅತ್ಯಾಚಾರ ಆರೋಪಿ ಹಾಲಪ್ಪನ ಕಥೆ, ಹಾವೇರಿ ಗೋಲಿಬಾರ್ ನ್ಯಾ. ಜಗನ್ನಾಥ್ ಶೆಟ್ಟಿ ವರದಿ, ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವುದು, ಆಸರೆ ಯೋಜನೆಯಲ್ಲಿನ ಲೋಪ ದೋಷಗಳು, ಸಾಧನಾ ಸಮಾವೇಶದ ಖರ್ಚುವೆಚ್ಚ,, ಬಿತ್ತನೆ ಬೀಜ ಅವ್ಯವಹಾರ, ಕುಡಿಯುವ ನೀರಿಗೆ ಎದ್ದಿರುವ ಹಾಹಾಕಾರ.. ಹೀಗೆ ಅನೇಕಾನೇಕ ಸಮಸ್ಯೆಗಳಪಟ್ಟಿಯನ್ನು ಪ್ರತಿಪಕ್ಷಗಳು ತಯಾರಿಸಿಕೊಂಡಿವೆ.
ಬಿಜೆಪಿಯೂ ಸಮರಕ್ಕೆ ಸಿದ್ಧ: ಎರಡು ವರ್ಷ ಅಧಿಕಾರ ಪೂರೈಸಿದ ಸಂಭ್ರಮದಲ್ಲಿರುವ ಬಿಜೆಪಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಯಡಿಯೂರಪ್ಪ ಅವರು ಕೂಡ ಪ್ರತಿಪಕ್ಷಗಳ ಆಂತರಿಕ ಕಚ್ಚಾಟ, ಹುಳುಕುಗಳನ್ನು ಎತ್ತಿ ತೋರಿಸಲು ನಿರ್ಧರಿಸಿದ್ದಾರೆ. ಎರಡು ವರ್ಷಗಳ ಸಾಧನೆ ಪಟ್ಟಿಯನ್ನು ಸದನದಲ್ಲಿ ಮಂಡಿಸಿ, ಪ್ರತಿಪಕ್ಷಗಳ ಬಾಯಿ ಮುಚ್ಚಿಸಲು ಸನ್ನದ್ಧರಾಗಿದ್ದಾರೆ. ಕಾಂಗ್ರೆಸ್ ನಿಂದ ನೆರೆ ಪರಿಹಾರ ನಿಧಿ ದುರ್ಬಳಕೆ ಪ್ರಮುಖ ಆಸ್ತ್ರವಾಗುವ ಎಲ್ಲಾ ಸಾಧ್ಯತೆಗಳಿವೆ.
ಹಲವು ವಿಧೇಯಕಗಳ ಮಂಡನೆ: ಸುಮಾರು 25 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಅಕ್ರಮ ಸಕ್ರಮ ವಿಧೇಯಕ ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ವಿಧೇಯಕಗಳು ಮಂಡನೆಯಾಗಲಿದ್ದು, ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಪರಸ್ಪರ ಕೆಸರೆರಚಾಟದಲ್ಲಿ ವಿಧೇಯಕಗಳ ಬಗ್ಗೆ ಚರ್ಚೆ ನಡೆಯುವುದು ಸಾಧ್ಯವೇ ಎಂಬ ಅನುಮಾನ ಶ್ರೀಸಾಮಾನ್ಯನನ್ನು ಕಾಡುತ್ತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications