ನಮಗೆ ನೋಟಿಸ್ ಬಂದಿಲ್ಲ: ಶ್ರೀರಾಮುಲು

ಲಾಭದಾಯಕ ಸ್ಥಾನ ಹೊಂದಿರುವ ಆರೋಪದ ಮೇಲೆ ರಾಜ್ಯ ಚುನಾವಣಾ ಆಯೋಗ ಇಂದು ನೋಟಿಸ್ ನೀಡಿದೆ. ಆದರೆ, ಯಾವುದೇ ನೋಟಿಸ್ ನಮಗೆ ತಲುಪಿಲ್ಲ ಎಂದು ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.
ಲಾಭದಾಯಕ ಹುದ್ದೆ ಹಾಗೂ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಪ್ರಭಾವಿ ಸಚಿವರುಗಳಾದ ಶ್ರೀರಾಮುಲು, ಜನಾರ್ದನರೆಡ್ಡಿ ಹಾಗೂ ಕರುಣಾಕರ ರೆಡ್ಡಿ ಅವರಿಗೆ ವಿವರಣೆ ಕೋರಿ ನೋಟಿಸ್ ನೀಡುವಂತೆ ಕೇಂದ್ರ ಚುನಾವಣಾ ಆಯೋಗ ಆದೇಶ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಆದೇಶ ನೀಡಿತ್ತು.
ಕರ್ನಾಟಕ-ಆಂಧ್ರ ಗಡಿ ಭಾಗದಲ್ಲಿ ಸಿಬಿಐ ನಡೆಸಿದ್ದ ತಪಾಸಣೆ ವೇಳೆ ಬಳ್ಳಾರಿ ಸಚಿವರ ಮೇಲೆ ಕೇಳಿ ಬಂದಿದ್ದ ಆರೋಪದ ಹಿನ್ನೆಲೆಯಲ್ಲಿ ಹಾಗೂ ವಿಧಾನ ಪರಿಷತ್ ಸದಸ್ಯ ಕೆಸಿ ಕೊಂಡಯ್ಯ ರಾಜ್ಯಪಾಲರಿಗೆ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ರಾಜ್ಯಪಾಲರೆದುರು ಖುದ್ದು ಹಾಜರಾಗಿ ಜನಾರ್ದನ ರೆಡ್ಡಿ ಉತ್ತರ ನೀಡಲು ನಿರಾಕರಿಸಿದ್ದರು.
ಈ ಹಿನ್ನೆಲೆಯಲ್ಲಿ ಕುಪಿತರಾಗಿದ್ದ ರಾಜ್ಯಪಾಲರು ದೂರನ್ನು ಸೂಕ್ತ ಕ್ರಮ ಕ್ಕಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ರವಾನಿಸಿದ್ದರು. ಕೆಸಿ ಕೊಂಡಯ್ಯ ಅವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಸಚಿವರಾದ ಜನಾರ್ದನರೆಡ್ಡಿ, ಕರುಣಾಕರರೆಡ್ಡಿ ಹಾಗೂ ಶ್ರೀರಾಮುಲು ಅವರುಗಳ ವಿರುದ್ಧ ಕ್ರಮಕ್ಕೆ ರಾಜ್ಯಪಾಲರು ಶಿಫಾರಸು ಮಾಡಿದ್ದರು.
ಈ ದೂರನ್ನು ಪರಾಮರ್ಶಿಸಿದ ಕೇಂದ್ರ ಚುನಾವಣಾ ಆಯೋಗ ಸಚಿವರಿಂದ ವಿವರಣೆ ಕೋರಿ ನೋಟಿಸ್ ನೀಡಲು ಮುಂದಾಗಿದೆ. ದೆಹಲಿಯಿಂದ ಬಂದಿರುವ ಸೂಚನೆ ಮೇರೆಗೆ ಮೂವರು ಸಚಿವರಿಗೆ ರಾಜ್ಯ ಚುನಾವಣಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಇಂದು ಮುಂಗಾರು ಅಧಿವೇಶನ ಅರಂಭವಾಗಿದ್ದು, ಪ್ರತಿಪಕ್ಷಗಳಿಗೆ ರೆಡ್ಡಿಗಳಿಗೆ ನೋಟಿಸ್ ನೀಡಿರುವುದು ಪ್ರಮುಖ ಅಸ್ತ್ರವಾಗಲಿದೆ. ರೆಡ್ಡಿ ಸದರರಿಗೆ ಜುಲೈ 15ರೊಳಗೆ ವಿವರಣೆ ನೀಡಲು ಆದೇಶಿಸಲಾಗಿದೆ.
ರೆಡ್ಡಿ ಪ್ರತಿಕ್ರಿಯೆ :ನಮ್ಮ ಧರ್ಮ ನಮ್ಮ ಕೈಬಿಡುವುದಿಲ್ಲ. ಧರ್ಮವನ್ನು ರಕ್ಷಿಸಿದವನಿಗೆ ಧರ್ಮ ರಕ್ಷಿಸುತ್ತದೆ ಎಂಬ ಉಕ್ತಿಯಂತೆ ನಮಗೆ ಜಯ ಸಿಗಲಿದೆ.
ನಾವು ಸತ್ಯ ಮತ್ತು ಧರ್ಮದ ಹಾದಿಯಲ್ಲಿ ನಡೆಯುತ್ತಿದ್ದು, ಈಗ ಎದುರಾಗಿರುವ ಸಮಸ್ಯೆಯನ್ನೂ ಪರಿಹರಿಸಿಕೊಳ್ಳುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಜರ್ನಾದನ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
ನಾವು ಯಾವುದೇ ಅನ್ಯಾಯ, ಅಕ್ರಮ ಎಸಗಿಲ್ಲ. ನಮ್ಮದು ನಿಯತ್ತಿನ ಬದುಕು, ನ್ಯಾಯದ ಹಾದಿಯಲ್ಲಿ ನಡೆಯುವವರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ವಿಶ್ವಾಸವ್ಯಕ್ತಪಡಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications