ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದ್ಯುತ್ ಕ್ಷಾಮ ಹಳೆ ಸರ್ಕಾರಗಳ ಪಾಪದ ಫಲ

By Mahesh
|
Google Oneindia Kannada News

KS Eshwarappa
ಕುಣಿಗಲ್, ಜೂ. 28: ರಾಜ್ಯದಲ್ಲಿ ವಿದ್ಯುತ್ ಕ್ಷಾಮ ನೀಗಿಸಲು ಬಿಜೆಪಿ ಸರ್ಕಾರ 10 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ತಿಳಿಸಿದರು. ಹಿಂದಿನ ಸರ್ಕಾರಗಳು ನಡೆಸಿದ ಬೇಜವಾಬ್ದಾರಿ ಆಡಳಿತ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಉಲ್ಬಣಗೊಳ್ಳಲು ಕಾರಣವಾಗಿದೆ ಎಂದು ಆರೋಪಿಸಿದರು.

50 ವರ್ಷ ಸುದೀರ್ಘ ಕಾಲ ರಾಜ್ಯವನ್ನಾಳಿದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ದಲಿತ ಹಾಗೂ ಅಲ್ಪಸಂಖ್ಯಾತ ವರ್ಗವನ್ನು ಕೇವಲ ವೋಟ್ ಬ್ಯಾಂಕ್‌ಗಳನ್ನಾಗಿ ಮಾಡಿಕೊಂಡಿದ್ದವೇ ವಿನಃ ಈ ಸಮುದಾಯಗಳ ಅಭಿವೃದ್ಧಿಗೆ ಯಾವುದೇ ನಿರ್ದಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿರಲಿಲ್ಲ.

ಆದರೆ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ಅಲ್ಪಸಂಖ್ಯಾತರ ಅಭಿವೃದ್ಧಿಗೆ 207 ಕೋಟಿ ರು.ಗಳನ್ನು ಮೀಸಲಿಸಿರಿದೆ. ಅಲ್ಲದೆ ವಿವಿಧ ಸಮುದಾಯಗಳ ಉಪಕಸುಬುಗಳಿಗೆ ಸಾವಿರಾರು ಕೋಟಿ ರೂ.ಗಳ ಹಣ ಮಂಜೂರು ಮಾಡಿದೆ ಎಂದು ತಿಳಿಸಿದರು.

ಅಸಹಾಯಕ ಜನರ ಜೀವನೋಪಾಯಕ್ಕಾಗಿ ಸಂಧ್ಯಾ ಸುರಕ್ಷಾ, ಭಾಗ್ಯಲಕ್ಷ್ಮಿ , ವಿಧವಾ ವೇತನ, ಅಂಗವಿಕಲ ವೇತನಗಳನ್ನು ಜರಿಗೆ ತಂದು ಹಿಂದಿನ ಸರ್ಕಾರಗಳು ನೀಡುತ್ತಿದ್ದ 100 ರು. ಬದಲಾಗಿ 400 ಹಾಗೂ 1000 ರು. ಗಳಿಗೆ ಮಾಸಿಕ ವೇತನ ಹೆಚ್ಚಿಸಿದ ಖ್ಯಾತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ. ಕೇವಲ 2 ವರ್ಷದಲ್ಲಿ ರಾಜ್ಯದ 92 ಲಕ್ಷ ಜನರಿಗೆ ಸೌಲಭ್ಯ ಕಲ್ಪಿಸಿಕೊಟ್ಟ ಪ್ರಥಮ ಸರ್ಕಾರ ನಮ್ಮದಾಗಿದೆ ಎಂದು ಹೇಳಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X