ಅಗ್ನಿ ಶ್ರೀಧರ್ ವಿರುದ್ಧ ಶ್ರೀಶ್ರೀ ರವಿಶಂಕರ್ ದೂರು

ನಿಮ್ಮ ಹಾಗೂ ಆರ್ಟ್ ಆಫ್ ಲಿವಿಂಗ್ ಕೇಂದ್ರಕ್ಕೆ ಅಪಮಾನ ಮಾಡುವಂತಹ ಸಿಡಿಗಳು ನಮ್ಮ ಬಳಿ ಇವೆ. ಕೇಳಿದಷ್ಟು ಹಣ ನೀಡದಿದ್ದರೆ ಅದನ್ನು ಬಹಿರಂಗಗೊಳಿಸುವುದಾಗಿ ನಮಗೆ ಅಗ್ನಿ ಪತ್ರಿಕೆ ಸಂಪಾದಕ ಶ್ರೀಧರ್ ಕರೆ ಮಾಡಿ ಬೆದರಿಕೆ ಒಡ್ಡಿದ್ದಾರೆ ಎಂದು ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಶ್ರೀಶ್ರೀ ರವಿಶಂಕರ್ ಗುರೂಜಿ ದೂರು ದಾಖಲಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಗ್ನಿ ಶ್ರೀಧರ್, ಗುರೂಜಿ ಅವರಿಗೆ ಕರೆ ಮಾಡಿ ಬೆದರಿಕೆ ಒಡ್ಡುವಂತಹ ಕೆಳಮಟ್ಟದ ವ್ಯಕ್ತಿ ನಾನಲ್ಲ. ಸುಮಾರು 12 ವರ್ಷಗಳ ಕಾಲ ಪತ್ರಿಕೆಯೊಂದರ ಸಂಪಾದಕನಾಗಿ ಕೆಲಸ ಮಾಡುತ್ತಿರುವೆ. ಇಂತಹ ಕರೆ ಮಾಡುವ ಅವಶ್ಯಕತೆಯಾಗಲಿ, ಅಗತ್ಯತೆಯಾಗಲಿ ನನಗಿಲ್ಲ. ಶ್ರೀಗಳು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಗುರೂಜಿ ಮಾಡಿರುವ ಆರೋಪವನ್ನು ಸಾರಾಸಗಟಾಗಿ ತಳ್ಳಿ ಹಾಕಿರುವ ಶ್ರೀಧರ್, ಶ್ರೀಗಳನ್ನು ನಾನೇ ಖುದ್ದು ಭೇಟಿ ಮಾಡಿ ಚರ್ಚಿಸುವುದಾಗಿ ಹೇಳಿದ್ದಾರೆ. 15 ಎಕರೆ ಜಮೀನನ್ನು ಆರ್ಟ್ ಆಫ್ ಲೀವಿಂಗ್ ಅಕ್ರಮವಾಗಿ ವಶಪಡಿಸಿಕೊಂಡಿದೆ. ಈ ಬಗ್ಗೆ ಅನೇಕ ಸಲ ನಾನು ಪ್ರತಿಭಟಿಸಿರುವೆ. ಆದರೆ, ಕರೆ ಮಾಡಿ ಬೆದರಿಕೆ ಒಡ್ಡುವಂತ ಕೀಳಮಟ್ಟಕ್ಕೆ ಇಳಿಯುವವನಲ್ಲ ಎಂದಿದ್ದಾರೆ. ಆಸ್ತಿ ಕಬಳಿಕೆಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಶ್ರೀಧರ್ ಒತ್ತಾಯಿಸಿದ್ದಾರೆ.
ಕೇಳಿದಷ್ಟು ಹಣ ನೀಡದಿದ್ದರೆ ನಿಮ್ಮ ಹಾಗೂ ಆರ್ಟ್ ಆಫ್ ಲಿವಿಂಗ್ ನ ಮಾನ ಕಳೆಯುತ್ತೇನೆ. ಅದಕ್ಕೆ ಬೇಕಿರುವ ಎಲ್ಲ ಸಿಡಿಗಳು ನಮ್ಮ ಬಳಿ ಇವೆ. ಕೆಲ ದಿನಗಳ ಹಿಂದೆ ವ್ಯಕ್ತಿಯೊಬ್ಬ ಆಶ್ರಮಕ್ಕೆ ಕರೆ ಮಾಡಿ ಬೆದರಿಕೆ ಹಾಕಿದ್ದ. ಇದರಲ್ಲಿ ಯಾವುದೇ ಮಹತ್ವವಿಲ್ಲ ಎಂದು ಆಶ್ರಮವಾಸಿಗಳು ಭಾವಿಸಿದ್ದರು. ಈಗ ಮತ್ತೆ ಹಣಕ್ಕಾಗಿ ಬೆದರಿಕೆ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಹಣ ನೀಡದಿದ್ದರೆ ಮಾಧ್ಯಮಕ್ಕೆ ಈ ಸಿಡಿಗಳನ್ನು ಬಿಡುಗಡೆ ಮಾಡುತ್ತೇವೆ. ಇದರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ನೀವು ಮತ್ತು ಆರ್ಟ್ ಆಫ್ ಲಿವಿಂಗ್ ನ ಮಾನವನ್ನು ಕಳೆಯುವುದಾಗಿ ಬೆದರಿಕೆ ಮಾಡಿದ್ದರು ಎಂದು ಗುರೂಜಿ ಮಂಗಳವಾರ ಪತ್ರಿಕೆಗಳಿಗೆ ಹೇಳಿಕೆ ನೀಡಿದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications